ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಪ್ತು ನಿಗಮದ ವತಿಯಿಂದ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ರೈತರನ್ನು ಉದ್ಯಮಿಗಳಾಗಿ ಸ್ವಾವಲಂಬಿಗೊಳಿಸಲು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ವಿಸ್ತರಣೆಗೆ ಅನುಕೂಲವಾಗಲು ಯೋಜನೆ ಸಹಕಾರಿಯಾಗಿದೆ.
ಕೃಷಿ ಸಮಾಜದ ಜಿಲ್ಲಾಧ್ಯಕ್ಷ ವೀರ ಗೋಪಾಲ್, ಕಾರ್ಯಾಗಾರದ ಮೂಲಕ ರೈತರಿಗೆ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ಕೃಷಿ ಸೌಲಭ್ಯಗಳ ಕುರಿತು ಉಪಯುಕ್ತ ಮಾಹಿತಿ ನೀಡಲಾಯಿತು ಎಂದರು. ಕಾರ್ಯಾಗಾರದ ಮೂಲಕ 500 ಜನ ರೈತರಿಗೆ ಯೋಜನೆಯ ಕುರಿತು ಅರಿವು ಮೂಡಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು, ಜಂಟಿ ಕೃಷಿ ನಿರ್ದೇಶಕರಾದ ಅಂಬಿಕಾ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ನಟರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರೈತರು ಕೃಷಿ ಉತ್ಪನ್ನಗಳನ್ನು ವಿನೂತನವಾಗಿ ಬಳಕೆ ಮಾಡಿಕೊಂಡು ರೈತ ಉದ್ಯಮಿಗಳಾಗಿ ಹೊರಹೊಮ್ಮಲು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆ ಸಹಕಾರಿಯಾಗಲಿದೆ ಎಂದು ರೈತ ಮುಖಂಡ ಸಿ. ಪುಟ್ಟಸ್ವಾಮಿ ತಿಳಿಸಿದರು.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…