ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಪ್ತು ನಿಗಮದ ವತಿಯಿಂದ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ರೈತರನ್ನು ಉದ್ಯಮಿಗಳಾಗಿ ಸ್ವಾವಲಂಬಿಗೊಳಿಸಲು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ವಿಸ್ತರಣೆಗೆ ಅನುಕೂಲವಾಗಲು ಯೋಜನೆ ಸಹಕಾರಿಯಾಗಿದೆ.
ಕೃಷಿ ಸಮಾಜದ ಜಿಲ್ಲಾಧ್ಯಕ್ಷ ವೀರ ಗೋಪಾಲ್, ಕಾರ್ಯಾಗಾರದ ಮೂಲಕ ರೈತರಿಗೆ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ಕೃಷಿ ಸೌಲಭ್ಯಗಳ ಕುರಿತು ಉಪಯುಕ್ತ ಮಾಹಿತಿ ನೀಡಲಾಯಿತು ಎಂದರು. ಕಾರ್ಯಾಗಾರದ ಮೂಲಕ 500 ಜನ ರೈತರಿಗೆ ಯೋಜನೆಯ ಕುರಿತು ಅರಿವು ಮೂಡಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು, ಜಂಟಿ ಕೃಷಿ ನಿರ್ದೇಶಕರಾದ ಅಂಬಿಕಾ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ನಟರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರೈತರು ಕೃಷಿ ಉತ್ಪನ್ನಗಳನ್ನು ವಿನೂತನವಾಗಿ ಬಳಕೆ ಮಾಡಿಕೊಂಡು ರೈತ ಉದ್ಯಮಿಗಳಾಗಿ ಹೊರಹೊಮ್ಮಲು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆ ಸಹಕಾರಿಯಾಗಲಿದೆ ಎಂದು ರೈತ ಮುಖಂಡ ಸಿ. ಪುಟ್ಟಸ್ವಾಮಿ ತಿಳಿಸಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…