ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಪ್ತು ನಿಗಮದ ವತಿಯಿಂದ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ರೈತರನ್ನು ಉದ್ಯಮಿಗಳಾಗಿ ಸ್ವಾವಲಂಬಿಗೊಳಿಸಲು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ವಿಸ್ತರಣೆಗೆ ಅನುಕೂಲವಾಗಲು ಯೋಜನೆ ಸಹಕಾರಿಯಾಗಿದೆ.
ಕೃಷಿ ಸಮಾಜದ ಜಿಲ್ಲಾಧ್ಯಕ್ಷ ವೀರ ಗೋಪಾಲ್, ಕಾರ್ಯಾಗಾರದ ಮೂಲಕ ರೈತರಿಗೆ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ಕೃಷಿ ಸೌಲಭ್ಯಗಳ ಕುರಿತು ಉಪಯುಕ್ತ ಮಾಹಿತಿ ನೀಡಲಾಯಿತು ಎಂದರು. ಕಾರ್ಯಾಗಾರದ ಮೂಲಕ 500 ಜನ ರೈತರಿಗೆ ಯೋಜನೆಯ ಕುರಿತು ಅರಿವು ಮೂಡಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು, ಜಂಟಿ ಕೃಷಿ ನಿರ್ದೇಶಕರಾದ ಅಂಬಿಕಾ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ನಟರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರೈತರು ಕೃಷಿ ಉತ್ಪನ್ನಗಳನ್ನು ವಿನೂತನವಾಗಿ ಬಳಕೆ ಮಾಡಿಕೊಂಡು ರೈತ ಉದ್ಯಮಿಗಳಾಗಿ ಹೊರಹೊಮ್ಮಲು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆ ಸಹಕಾರಿಯಾಗಲಿದೆ ಎಂದು ರೈತ ಮುಖಂಡ ಸಿ. ಪುಟ್ಟಸ್ವಾಮಿ ತಿಳಿಸಿದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…