ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಪ್ತು ನಿಗಮದ ವತಿಯಿಂದ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ರೈತರನ್ನು ಉದ್ಯಮಿಗಳಾಗಿ ಸ್ವಾವಲಂಬಿಗೊಳಿಸಲು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ವಿಸ್ತರಣೆಗೆ ಅನುಕೂಲವಾಗಲು ಯೋಜನೆ ಸಹಕಾರಿಯಾಗಿದೆ.
ಕೃಷಿ ಸಮಾಜದ ಜಿಲ್ಲಾಧ್ಯಕ್ಷ ವೀರ ಗೋಪಾಲ್, ಕಾರ್ಯಾಗಾರದ ಮೂಲಕ ರೈತರಿಗೆ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ಕೃಷಿ ಸೌಲಭ್ಯಗಳ ಕುರಿತು ಉಪಯುಕ್ತ ಮಾಹಿತಿ ನೀಡಲಾಯಿತು ಎಂದರು. ಕಾರ್ಯಾಗಾರದ ಮೂಲಕ 500 ಜನ ರೈತರಿಗೆ ಯೋಜನೆಯ ಕುರಿತು ಅರಿವು ಮೂಡಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು, ಜಂಟಿ ಕೃಷಿ ನಿರ್ದೇಶಕರಾದ ಅಂಬಿಕಾ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ನಟರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರೈತರು ಕೃಷಿ ಉತ್ಪನ್ನಗಳನ್ನು ವಿನೂತನವಾಗಿ ಬಳಕೆ ಮಾಡಿಕೊಂಡು ರೈತ ಉದ್ಯಮಿಗಳಾಗಿ ಹೊರಹೊಮ್ಮಲು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆ ಸಹಕಾರಿಯಾಗಲಿದೆ ಎಂದು ರೈತ ಮುಖಂಡ ಸಿ. ಪುಟ್ಟಸ್ವಾಮಿ ತಿಳಿಸಿದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…