ದ್ವಿದಳಧಾನ್ಯಗಳನ್ನು ಬೆಳೆಯಲು ಕೇಂದ್ರದ ಉತ್ತೇಜನ | ರಾಯಚೂರಿನಲ್ಲಿ ಯಶಸ್ವಿ

August 26, 2024
2:05 PM

ಕೇಂದ್ರ ಸರ್ಕಾರ ದ್ವಿದಳ ಧಾನ್ಯಗಳನ್ನು ಬೆಳೆಯಲು ಉತ್ತೇಜನ ನೀಡುತ್ತಿದ್ದು, ಆಹಾರ ಭದ್ರತೆ ಮತ್ತು ರಾಷ್ಟ್ರೀಯ ಖಾದ್ಯ ಅಭಿಯಾನದಡಿ ಇಳುವರಿ ಹೆಚ್ಚಳಕ್ಕೆ ಆದ್ಯತೆ ನೀಡಿದೆ.

Advertisement
Advertisement

ಪ್ರಸಕ್ತ ಹಂಗಾಮಿನಲ್ಲಿ ರಾಯಚೂರು ಜಿಲ್ಲೆಯಲ್ಲಿ ರೈತರು ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆದಿದ್ದಾರೆ. ಪ್ರಸಕ್ತ ವರ್ಷ ಬಹುತೇಕ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಬೂದಯ್ಯ, ತೊಗರಿ, ಹೆಸರು, ಹತ್ತಿಯಂತಹ ದ್ವಿದಳಧಾನ್ಯಗಳ ಮುಂಗಾರು ಬೆಳೆಯು ಈ ಬಾರಿ ಉತ್ತಮ ಇಳುವರಿ ನೀಡುವ ನಿರೀಕ್ಷೆ ಇದೆ. ಹಿಂಗಾರಿನಲ್ಲಿ ಜೋಳ, ಕಡಲೆ ಬೆಳೆಯುತ್ತಿದ್ದು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲಾಗಿದೆ ಎಂದರು.

Advertisement

ರಾಯಚೂರು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಪ್ರಕಾಶ್, ದೇವದುರ್ಗದಲ್ಲಿ ಶೇಕಡ 18 ರಷ್ಟು, ಮಾನ್ವಿಯಲ್ಲಿ ಶೇಕಡ 14 ರಷ್ಟು ಮಳೆ ಕೊರತೆ ಹೊರತುಪಡಿಸಿದರೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಖುಷ್ಕಿ ಭೂಮಿಯಲ್ಲಿ ಶೇಕಡ 90 ರಷ್ಟು ಬಿತ್ತನೆ ಗುರಿ ಸಾಧಿಸಲಾಗಿದೆ. ಮುಂಗಾರು ಬೆಳೆ ತೊಗರಿ, ಹಿಂಗಾರು ಬೆಳೆ ಕಡಲೆಯ ಇಳುವರಿ ಹೆಚ್ಚಳಕ್ಕೆ ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸಲಾಗಿದೆ. ಕ್ಷೇತ್ರಮಟ್ಟದಲ್ಲಿ ಮಣ್ಣಿನ ಫಲವತ್ತತೆ ಸ್ಥಿರಗೊಳಿಸುವುದು ಯೋಜನೆಯ ಉದ್ದೇಶವಾಗಿದೆ ಎಂದು ವಿವರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |
September 19, 2024
10:42 PM
by: ದ ರೂರಲ್ ಮಿರರ್.ಕಾಂ
ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |
September 19, 2024
9:17 PM
by: ದ ರೂರಲ್ ಮಿರರ್.ಕಾಂ
ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ
September 19, 2024
9:00 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |
September 19, 2024
8:53 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror