Advertisement
MIRROR FOCUS

ದ್ವಿದಳಧಾನ್ಯಗಳನ್ನು ಬೆಳೆಯಲು ಕೇಂದ್ರದ ಉತ್ತೇಜನ | ರಾಯಚೂರಿನಲ್ಲಿ ಯಶಸ್ವಿ

Share

ಕೇಂದ್ರ ಸರ್ಕಾರ ದ್ವಿದಳ ಧಾನ್ಯಗಳನ್ನು ಬೆಳೆಯಲು ಉತ್ತೇಜನ ನೀಡುತ್ತಿದ್ದು, ಆಹಾರ ಭದ್ರತೆ ಮತ್ತು ರಾಷ್ಟ್ರೀಯ ಖಾದ್ಯ ಅಭಿಯಾನದಡಿ ಇಳುವರಿ ಹೆಚ್ಚಳಕ್ಕೆ ಆದ್ಯತೆ ನೀಡಿದೆ.

ಪ್ರಸಕ್ತ ಹಂಗಾಮಿನಲ್ಲಿ ರಾಯಚೂರು ಜಿಲ್ಲೆಯಲ್ಲಿ ರೈತರು ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆದಿದ್ದಾರೆ. ಪ್ರಸಕ್ತ ವರ್ಷ ಬಹುತೇಕ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಬೂದಯ್ಯ, ತೊಗರಿ, ಹೆಸರು, ಹತ್ತಿಯಂತಹ ದ್ವಿದಳಧಾನ್ಯಗಳ ಮುಂಗಾರು ಬೆಳೆಯು ಈ ಬಾರಿ ಉತ್ತಮ ಇಳುವರಿ ನೀಡುವ ನಿರೀಕ್ಷೆ ಇದೆ. ಹಿಂಗಾರಿನಲ್ಲಿ ಜೋಳ, ಕಡಲೆ ಬೆಳೆಯುತ್ತಿದ್ದು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲಾಗಿದೆ ಎಂದರು.

ರಾಯಚೂರು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಪ್ರಕಾಶ್, ದೇವದುರ್ಗದಲ್ಲಿ ಶೇಕಡ 18 ರಷ್ಟು, ಮಾನ್ವಿಯಲ್ಲಿ ಶೇಕಡ 14 ರಷ್ಟು ಮಳೆ ಕೊರತೆ ಹೊರತುಪಡಿಸಿದರೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಖುಷ್ಕಿ ಭೂಮಿಯಲ್ಲಿ ಶೇಕಡ 90 ರಷ್ಟು ಬಿತ್ತನೆ ಗುರಿ ಸಾಧಿಸಲಾಗಿದೆ. ಮುಂಗಾರು ಬೆಳೆ ತೊಗರಿ, ಹಿಂಗಾರು ಬೆಳೆ ಕಡಲೆಯ ಇಳುವರಿ ಹೆಚ್ಚಳಕ್ಕೆ ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸಲಾಗಿದೆ. ಕ್ಷೇತ್ರಮಟ್ಟದಲ್ಲಿ ಮಣ್ಣಿನ ಫಲವತ್ತತೆ ಸ್ಥಿರಗೊಳಿಸುವುದು ಯೋಜನೆಯ ಉದ್ದೇಶವಾಗಿದೆ ಎಂದು ವಿವರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

7 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

18 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

19 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

22 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago