ಕೇಂದ್ರ ಸರ್ಕಾರ ದ್ವಿದಳ ಧಾನ್ಯಗಳನ್ನು ಬೆಳೆಯಲು ಉತ್ತೇಜನ ನೀಡುತ್ತಿದ್ದು, ಆಹಾರ ಭದ್ರತೆ ಮತ್ತು ರಾಷ್ಟ್ರೀಯ ಖಾದ್ಯ ಅಭಿಯಾನದಡಿ ಇಳುವರಿ ಹೆಚ್ಚಳಕ್ಕೆ ಆದ್ಯತೆ ನೀಡಿದೆ.
ಪ್ರಸಕ್ತ ಹಂಗಾಮಿನಲ್ಲಿ ರಾಯಚೂರು ಜಿಲ್ಲೆಯಲ್ಲಿ ರೈತರು ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆದಿದ್ದಾರೆ. ಪ್ರಸಕ್ತ ವರ್ಷ ಬಹುತೇಕ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಬೂದಯ್ಯ, ತೊಗರಿ, ಹೆಸರು, ಹತ್ತಿಯಂತಹ ದ್ವಿದಳಧಾನ್ಯಗಳ ಮುಂಗಾರು ಬೆಳೆಯು ಈ ಬಾರಿ ಉತ್ತಮ ಇಳುವರಿ ನೀಡುವ ನಿರೀಕ್ಷೆ ಇದೆ. ಹಿಂಗಾರಿನಲ್ಲಿ ಜೋಳ, ಕಡಲೆ ಬೆಳೆಯುತ್ತಿದ್ದು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲಾಗಿದೆ ಎಂದರು.
ರಾಯಚೂರು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಪ್ರಕಾಶ್, ದೇವದುರ್ಗದಲ್ಲಿ ಶೇಕಡ 18 ರಷ್ಟು, ಮಾನ್ವಿಯಲ್ಲಿ ಶೇಕಡ 14 ರಷ್ಟು ಮಳೆ ಕೊರತೆ ಹೊರತುಪಡಿಸಿದರೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಖುಷ್ಕಿ ಭೂಮಿಯಲ್ಲಿ ಶೇಕಡ 90 ರಷ್ಟು ಬಿತ್ತನೆ ಗುರಿ ಸಾಧಿಸಲಾಗಿದೆ. ಮುಂಗಾರು ಬೆಳೆ ತೊಗರಿ, ಹಿಂಗಾರು ಬೆಳೆ ಕಡಲೆಯ ಇಳುವರಿ ಹೆಚ್ಚಳಕ್ಕೆ ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸಲಾಗಿದೆ. ಕ್ಷೇತ್ರಮಟ್ಟದಲ್ಲಿ ಮಣ್ಣಿನ ಫಲವತ್ತತೆ ಸ್ಥಿರಗೊಳಿಸುವುದು ಯೋಜನೆಯ ಉದ್ದೇಶವಾಗಿದೆ ಎಂದು ವಿವರಿಸಿದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…