ಕೇಂದ್ರ ಸರ್ಕಾರ ದ್ವಿದಳ ಧಾನ್ಯಗಳನ್ನು ಬೆಳೆಯಲು ಉತ್ತೇಜನ ನೀಡುತ್ತಿದ್ದು, ಆಹಾರ ಭದ್ರತೆ ಮತ್ತು ರಾಷ್ಟ್ರೀಯ ಖಾದ್ಯ ಅಭಿಯಾನದಡಿ ಇಳುವರಿ ಹೆಚ್ಚಳಕ್ಕೆ ಆದ್ಯತೆ ನೀಡಿದೆ.
ಪ್ರಸಕ್ತ ಹಂಗಾಮಿನಲ್ಲಿ ರಾಯಚೂರು ಜಿಲ್ಲೆಯಲ್ಲಿ ರೈತರು ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆದಿದ್ದಾರೆ. ಪ್ರಸಕ್ತ ವರ್ಷ ಬಹುತೇಕ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಬೂದಯ್ಯ, ತೊಗರಿ, ಹೆಸರು, ಹತ್ತಿಯಂತಹ ದ್ವಿದಳಧಾನ್ಯಗಳ ಮುಂಗಾರು ಬೆಳೆಯು ಈ ಬಾರಿ ಉತ್ತಮ ಇಳುವರಿ ನೀಡುವ ನಿರೀಕ್ಷೆ ಇದೆ. ಹಿಂಗಾರಿನಲ್ಲಿ ಜೋಳ, ಕಡಲೆ ಬೆಳೆಯುತ್ತಿದ್ದು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲಾಗಿದೆ ಎಂದರು.
ರಾಯಚೂರು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಪ್ರಕಾಶ್, ದೇವದುರ್ಗದಲ್ಲಿ ಶೇಕಡ 18 ರಷ್ಟು, ಮಾನ್ವಿಯಲ್ಲಿ ಶೇಕಡ 14 ರಷ್ಟು ಮಳೆ ಕೊರತೆ ಹೊರತುಪಡಿಸಿದರೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಖುಷ್ಕಿ ಭೂಮಿಯಲ್ಲಿ ಶೇಕಡ 90 ರಷ್ಟು ಬಿತ್ತನೆ ಗುರಿ ಸಾಧಿಸಲಾಗಿದೆ. ಮುಂಗಾರು ಬೆಳೆ ತೊಗರಿ, ಹಿಂಗಾರು ಬೆಳೆ ಕಡಲೆಯ ಇಳುವರಿ ಹೆಚ್ಚಳಕ್ಕೆ ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸಲಾಗಿದೆ. ಕ್ಷೇತ್ರಮಟ್ಟದಲ್ಲಿ ಮಣ್ಣಿನ ಫಲವತ್ತತೆ ಸ್ಥಿರಗೊಳಿಸುವುದು ಯೋಜನೆಯ ಉದ್ದೇಶವಾಗಿದೆ ಎಂದು ವಿವರಿಸಿದರು.
ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ…
ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ…
ಮಲೆನಾಡು-ಕರಾವಳಿ ಸೇರಿದಂತೆ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹಲಸಿನ ಕಾಯಿ ದೋಸೆ ಹಿಟ್ಟಿನ ಪಡ್ಡು ಮಾಡುವ ವಿಧಾನ : ದೋಸೆ ಹಿಟ್ಟು,…
19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…