ಕೇಂದ್ರ ಸರ್ಕಾರ ದ್ವಿದಳ ಧಾನ್ಯಗಳನ್ನು ಬೆಳೆಯಲು ಉತ್ತೇಜನ ನೀಡುತ್ತಿದ್ದು, ಆಹಾರ ಭದ್ರತೆ ಮತ್ತು ರಾಷ್ಟ್ರೀಯ ಖಾದ್ಯ ಅಭಿಯಾನದಡಿ ಇಳುವರಿ ಹೆಚ್ಚಳಕ್ಕೆ ಆದ್ಯತೆ ನೀಡಿದೆ.
ಪ್ರಸಕ್ತ ಹಂಗಾಮಿನಲ್ಲಿ ರಾಯಚೂರು ಜಿಲ್ಲೆಯಲ್ಲಿ ರೈತರು ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆದಿದ್ದಾರೆ. ಪ್ರಸಕ್ತ ವರ್ಷ ಬಹುತೇಕ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಬೂದಯ್ಯ, ತೊಗರಿ, ಹೆಸರು, ಹತ್ತಿಯಂತಹ ದ್ವಿದಳಧಾನ್ಯಗಳ ಮುಂಗಾರು ಬೆಳೆಯು ಈ ಬಾರಿ ಉತ್ತಮ ಇಳುವರಿ ನೀಡುವ ನಿರೀಕ್ಷೆ ಇದೆ. ಹಿಂಗಾರಿನಲ್ಲಿ ಜೋಳ, ಕಡಲೆ ಬೆಳೆಯುತ್ತಿದ್ದು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲಾಗಿದೆ ಎಂದರು.
ರಾಯಚೂರು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಪ್ರಕಾಶ್, ದೇವದುರ್ಗದಲ್ಲಿ ಶೇಕಡ 18 ರಷ್ಟು, ಮಾನ್ವಿಯಲ್ಲಿ ಶೇಕಡ 14 ರಷ್ಟು ಮಳೆ ಕೊರತೆ ಹೊರತುಪಡಿಸಿದರೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಖುಷ್ಕಿ ಭೂಮಿಯಲ್ಲಿ ಶೇಕಡ 90 ರಷ್ಟು ಬಿತ್ತನೆ ಗುರಿ ಸಾಧಿಸಲಾಗಿದೆ. ಮುಂಗಾರು ಬೆಳೆ ತೊಗರಿ, ಹಿಂಗಾರು ಬೆಳೆ ಕಡಲೆಯ ಇಳುವರಿ ಹೆಚ್ಚಳಕ್ಕೆ ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸಲಾಗಿದೆ. ಕ್ಷೇತ್ರಮಟ್ಟದಲ್ಲಿ ಮಣ್ಣಿನ ಫಲವತ್ತತೆ ಸ್ಥಿರಗೊಳಿಸುವುದು ಯೋಜನೆಯ ಉದ್ದೇಶವಾಗಿದೆ ಎಂದು ವಿವರಿಸಿದರು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…