ಕೇಂದ್ರ ಸರ್ಕಾರ ದ್ವಿದಳ ಧಾನ್ಯಗಳನ್ನು ಬೆಳೆಯಲು ಉತ್ತೇಜನ ನೀಡುತ್ತಿದ್ದು, ಆಹಾರ ಭದ್ರತೆ ಮತ್ತು ರಾಷ್ಟ್ರೀಯ ಖಾದ್ಯ ಅಭಿಯಾನದಡಿ ಇಳುವರಿ ಹೆಚ್ಚಳಕ್ಕೆ ಆದ್ಯತೆ ನೀಡಿದೆ.
ಪ್ರಸಕ್ತ ಹಂಗಾಮಿನಲ್ಲಿ ರಾಯಚೂರು ಜಿಲ್ಲೆಯಲ್ಲಿ ರೈತರು ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆದಿದ್ದಾರೆ. ಪ್ರಸಕ್ತ ವರ್ಷ ಬಹುತೇಕ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಬೂದಯ್ಯ, ತೊಗರಿ, ಹೆಸರು, ಹತ್ತಿಯಂತಹ ದ್ವಿದಳಧಾನ್ಯಗಳ ಮುಂಗಾರು ಬೆಳೆಯು ಈ ಬಾರಿ ಉತ್ತಮ ಇಳುವರಿ ನೀಡುವ ನಿರೀಕ್ಷೆ ಇದೆ. ಹಿಂಗಾರಿನಲ್ಲಿ ಜೋಳ, ಕಡಲೆ ಬೆಳೆಯುತ್ತಿದ್ದು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲಾಗಿದೆ ಎಂದರು.
ರಾಯಚೂರು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಪ್ರಕಾಶ್, ದೇವದುರ್ಗದಲ್ಲಿ ಶೇಕಡ 18 ರಷ್ಟು, ಮಾನ್ವಿಯಲ್ಲಿ ಶೇಕಡ 14 ರಷ್ಟು ಮಳೆ ಕೊರತೆ ಹೊರತುಪಡಿಸಿದರೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಖುಷ್ಕಿ ಭೂಮಿಯಲ್ಲಿ ಶೇಕಡ 90 ರಷ್ಟು ಬಿತ್ತನೆ ಗುರಿ ಸಾಧಿಸಲಾಗಿದೆ. ಮುಂಗಾರು ಬೆಳೆ ತೊಗರಿ, ಹಿಂಗಾರು ಬೆಳೆ ಕಡಲೆಯ ಇಳುವರಿ ಹೆಚ್ಚಳಕ್ಕೆ ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸಲಾಗಿದೆ. ಕ್ಷೇತ್ರಮಟ್ಟದಲ್ಲಿ ಮಣ್ಣಿನ ಫಲವತ್ತತೆ ಸ್ಥಿರಗೊಳಿಸುವುದು ಯೋಜನೆಯ ಉದ್ದೇಶವಾಗಿದೆ ಎಂದು ವಿವರಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…