ರಾಜ್ಯದಲ್ಲಿ 13 ಸಾವಿರದ 644 ಕೆರೆಗಳು ಒತ್ತುವರಿಯಾಗಿದ್ದು, ಈ ಪೈಕಿ 7 ಸಾವಿರದ 986 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಮಂಡಿಸಿ ಮಾಹಿತಿ ನೀಡಿದ ಅವರು, 5 600 ಕೆರೆಗಳ ಒತ್ತುವರಿ ತೆರವು ಮಾಡುವುದು ಬಾಕಿ ಇದೆ. ಕೆರೆಗಳ ಸಂರಕ್ಷಣೆ ಅಭಿವೃದ್ಧಿಗೆ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ಪ್ರತಿಯೊಂದು ಗ್ರಾಮಗಳಲ್ಲಿರುವ ಕೆರೆಗಳ ಸಂರಕ್ಷಣೆಗೆ ಸಮಿತಿ ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧ್ಯಕ್ಷರು ಸಮಿತಿಯ ಅಧ್ಯಕ್ಷರಾಗಿರಲಿದ್ದಾರೆ. ಕೆರೆ ಸಂರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದರು.
ಈ ವೇಳೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ಜನಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿಲ್ಲ. ಕೆರೆ ಸಂರಕ್ಷಣೆ ಕಾಯ್ದೆಗೆ ತಿದ್ದುಪಡಿಯಿಂದ ಬಫರ್ ವಲಯದ ಗಾತ್ರ ಕಡಿಮೆಯಾಗುವುದರಿಂದ ಕೆರೆಗಳ ನಾಶವಾಗುವ ಸಾಧ್ಯತೆ ಇದೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆಗಳಿವೆ. ರಾಜಕಾಲುವೆ ತೆರವು ವಿಚಾರದಲ್ಲಿ ಸರ್ಕಾರ ವಿಫಲವಾಗಿವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ, ನಮ್ಮ X ಖಾತೆಯನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…