ಎಂಡೋಸಲ್ಫಾನ್ ಸಂತ್ರಸ್ತರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಯಾ ಆರೋಗ್ಯ ಕೇಂದ್ರ ಮಟ್ಟದಲ್ಲಿ ಎಂಡೋ ಸಂತ್ರಸ್ತರು, ಅವರ ಪೋಷಕರು, ವೈದ್ಯಾಧಿಕಾರಿಗಳು, ಪಿಡಿಓ, ವಿ.ಎ. ಅವರನ್ನೊಳಗೊಂಡ ತಂಡ ರಚಿಸಬೇಕು. ಎಂಡೋಸಲ್ಫಾನ್ ಬಾಧಿತ ಮಕ್ಕಳು ಮಾನಸಿಕ ಅಂಗವೈಕಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ನರಳುತ್ತಾರೆ. ಅವರನ್ನು ಗುರುತಿಸಿ, ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆ ಅಧಿಕಾರಿಗಳು ಗ್ರಾಮವಾರು ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯನ್ನು ತಯಾರಿಸಿ ಅವರಿಗೆ ಅಗತ್ಯವಿರುವ ಔಷಧಗಳು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ತಪ್ಪದೇ ನೀಡಬೇಕು . ಅವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು.
ದ ಕ ಜಿಲ್ಲೆಯಲ್ಲಿ 364 ಎಂಡೋಸಲ್ಫಾನ್ ಪೀಡಿತರು ಸಾವನ್ನಪ್ಪಿದ್ದು, 6314 ಮಂದಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಎಂಡೋಸಲ್ಫಾನ್ ಕೋಶ ನೋಡಲ್ ಅಧಿಕಾರಿ ಡಾ. ನವೀನ್ಚಂದ್ರ ಕುಲಾಲ್ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಆರೋಗ್ಯ ಇಲಾಖೆ ಎಂಡೋಸಲ್ಫಾನ್ ವಿಭಾಗದ ಸಮನ್ವಯಾಧಿಕಾರಿ ಸಜೀವುದ್ದೀನ್, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…