ಎಂಡೋಸಲ್ಫಾನ್ ಸಂತ್ರಸ್ತರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಯಾ ಆರೋಗ್ಯ ಕೇಂದ್ರ ಮಟ್ಟದಲ್ಲಿ ಎಂಡೋ ಸಂತ್ರಸ್ತರು, ಅವರ ಪೋಷಕರು, ವೈದ್ಯಾಧಿಕಾರಿಗಳು, ಪಿಡಿಓ, ವಿ.ಎ. ಅವರನ್ನೊಳಗೊಂಡ ತಂಡ ರಚಿಸಬೇಕು. ಎಂಡೋಸಲ್ಫಾನ್ ಬಾಧಿತ ಮಕ್ಕಳು ಮಾನಸಿಕ ಅಂಗವೈಕಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ನರಳುತ್ತಾರೆ. ಅವರನ್ನು ಗುರುತಿಸಿ, ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆ ಅಧಿಕಾರಿಗಳು ಗ್ರಾಮವಾರು ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯನ್ನು ತಯಾರಿಸಿ ಅವರಿಗೆ ಅಗತ್ಯವಿರುವ ಔಷಧಗಳು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ತಪ್ಪದೇ ನೀಡಬೇಕು . ಅವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು.
ದ ಕ ಜಿಲ್ಲೆಯಲ್ಲಿ 364 ಎಂಡೋಸಲ್ಫಾನ್ ಪೀಡಿತರು ಸಾವನ್ನಪ್ಪಿದ್ದು, 6314 ಮಂದಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಎಂಡೋಸಲ್ಫಾನ್ ಕೋಶ ನೋಡಲ್ ಅಧಿಕಾರಿ ಡಾ. ನವೀನ್ಚಂದ್ರ ಕುಲಾಲ್ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಆರೋಗ್ಯ ಇಲಾಖೆ ಎಂಡೋಸಲ್ಫಾನ್ ವಿಭಾಗದ ಸಮನ್ವಯಾಧಿಕಾರಿ ಸಜೀವುದ್ದೀನ್, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…