ಬೆಳೆಗಳಿಗೆ ಶಕ್ತಿಯ ಸಾರ ಮೊದಲ ಮಳೆ, ಗುಡುಗು, ಸಿಡಿಲು | ನೈಸರ್ಗಿಕವಾಗಿ ಸಿಗುತ್ತದೆ ಭರಪೂರ ಇಂಗಾಲ, ಸಾರಜನಕ

May 22, 2023
11:51 AM

ಇತ್ತೀಚಿನ ಡಿಜಿಟಲ್ ಯುಗದಲ್ಲಿ  ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ಬಗೆಯ ಮಾಹಿತಿಗಳು ರೈತರಿಗೆ ಲಭ್ಯವಾಗುತ್ತದೆ. ಅದರಲ್ಲೂ ವಾಟ್ಸ್ ಅಪ್ ಗಳಲ್ಲಿ ಅನೇಕ ರೈತರ ತಮ್ಮ ಕೃಷಿ ಅನುಭವ, ತಾವು‌ ಮಾಡುವ ಕೃಷಿ, ತಾವು ಬಳಸುವ ಗೊಬ್ಬರ, ಸಾವಯವ ಕೃಷಿ, ವೈಜ್ಞಾನಿಕ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ. ಹೀಗೆ ವಾಟ್ಸ್ ಆಪ್ ನಲ್ಲಿ ಕೃಷಿಕರೊಬ್ಬರು ಹಂಚಿಕೊಂಡ ಮಾಹಿತಿಯನ್ನು ನೀವು ಓದಿ ನೋಡಿ.

Advertisement

ಇಂದು ನಮ್ಮ ಊರಿನಲ್ಲಿ ಗುಡುಗು ಮಿಂಚು ಸಮೇತ 2 ಗಂಟೆ ಬಾರಿ ಮಳೆ ಬಂದಿದೆ. ಅದರ ಪರಿಣಾಮವಾಗಿ ನಮ್ಮ ಭೂಮಿಗೆ ಪ್ರತಿ ಎಕರೆಗೆ ಸುಮಾರು 30 ಕೆಜಿ ಯೂರಿಯಾ ಗೊಬ್ಬರ ಲಭಿಸಿದಂತಾಗಿದೆ.ಈ ಮಾತು 100 ರಷ್ಟು ಸತ್ಯಾ ಈ ಮಾತನ್ನು ನಾನು ಹೇಳುತ್ತಿಲ್ಲ ನಮ್ಮ ಪರಂಪರೆ ಮತ್ತು ವಿಜ್ಞಾನ ಹೇಳುತ್ತದೆ

ಪಾರಂಪರಿಕವಾಗಿ ನಮ್ಮ ಹಿರಿಯರು ಹೇಳುತ್ತಿದ್ದರು ರೋಣಿ ಮಳೆಯಾದರೆ ಓಣಿ ತುಂಬಾ ಕಾಳು ಎಂದು .
ಈ ಮಾತು ನಿಜ ಇದರಲ್ಲಿ ವಿಜ್ಞಾನವಿದೆ. ವಾತಾವರಣದಲ್ಲಿ ಶೇಕಡಾ 75 ಭಾಗ ಸಾರಜನಕ ಇದೆ 21ಭಾಗ ಆಮ್ಲಜನಕ ಇದೆ ಇವು ಎರೆಡರ ಮದ್ಯೆ ಮಿಂಚು ಬಂದರೆ ಅದು ನೈಟ್ರೇಟ್ ಆಮ್ಲವಾಗಿ ಬದಲಾಗುತ್ತದೆ ಆ ಆಮ್ಲ ಮಳೆ ನೀರಿನಲ್ಲಿ ಬೆರೆತರೆ ಅವುಗಳ ನಡುವೆ ರಾಸಾಯನಿಕ ಕ್ರಿಯೆ ನೆಡೆದು ಆರ್ಗ್ಯಾನಿಕ್ ನೈಟ್ರೋಜನ್ (ಸಾವಯವ ಸಾರಜನಕ) ಅಂದರೆ ನಾವು ಅಂಗಡಿಗಳಿಂದ ತರುವ ಯೂರಿಯಾ ಗೊಬ್ಬರ ಮಳೆ ನೀರಿನಲ್ಲಿ ಬೆರೆತು ಭೂಮಿಗೆ ಒದಗುತ್ತದೆ .

ಯಾರ ಭೂಮಿಯಲ್ಲಿ ಸಾವಯವ ಇಂಗಾಲ ಇದೆಯೋ ಅಥವಾ ನೀರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಇದೆಯೋ ಅಂಥವರ ಭೂಮಿಗೆ ಮೇಲೆ ಹೇಳಿದ ಹಾಗೆ ಪ್ರತಿ ಎಕರೆಗೆ 30 ಕೆಜಿ ಯೂರಿಯಾ ದೊರಕುತ್ತದೆ.

ಹಾಗಾಗಿ ರೈತ ಮಿತ್ರರಲ್ಲಿ ಒಂದು ವಿನಂತಿ ನಮ್ಮ ಜಮೀನಿನಲ್ಲಿ ಇಂಗಾಲದ ಪ್ರಮಾಣವನ್ನು ಹೆಚ್ಚಿಸಲು ಅಥವಾ ನೀರು ಹಿಡಿದು ಇಟ್ಟುಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಆದಷ್ಟು ರಾಸಾಯನಿಕ ಬಳಕೆ ಕಡಿಮೆ ಮಾಡಿ..

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group