Advertisement
ಸುದ್ದಿಗಳು

ಬೆಳೆಗಳಿಗೆ ಶಕ್ತಿಯ ಸಾರ ಮೊದಲ ಮಳೆ, ಗುಡುಗು, ಸಿಡಿಲು | ನೈಸರ್ಗಿಕವಾಗಿ ಸಿಗುತ್ತದೆ ಭರಪೂರ ಇಂಗಾಲ, ಸಾರಜನಕ

Share

ಇತ್ತೀಚಿನ ಡಿಜಿಟಲ್ ಯುಗದಲ್ಲಿ  ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ಬಗೆಯ ಮಾಹಿತಿಗಳು ರೈತರಿಗೆ ಲಭ್ಯವಾಗುತ್ತದೆ. ಅದರಲ್ಲೂ ವಾಟ್ಸ್ ಅಪ್ ಗಳಲ್ಲಿ ಅನೇಕ ರೈತರ ತಮ್ಮ ಕೃಷಿ ಅನುಭವ, ತಾವು‌ ಮಾಡುವ ಕೃಷಿ, ತಾವು ಬಳಸುವ ಗೊಬ್ಬರ, ಸಾವಯವ ಕೃಷಿ, ವೈಜ್ಞಾನಿಕ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ. ಹೀಗೆ ವಾಟ್ಸ್ ಆಪ್ ನಲ್ಲಿ ಕೃಷಿಕರೊಬ್ಬರು ಹಂಚಿಕೊಂಡ ಮಾಹಿತಿಯನ್ನು ನೀವು ಓದಿ ನೋಡಿ.

ಇಂದು ನಮ್ಮ ಊರಿನಲ್ಲಿ ಗುಡುಗು ಮಿಂಚು ಸಮೇತ 2 ಗಂಟೆ ಬಾರಿ ಮಳೆ ಬಂದಿದೆ. ಅದರ ಪರಿಣಾಮವಾಗಿ ನಮ್ಮ ಭೂಮಿಗೆ ಪ್ರತಿ ಎಕರೆಗೆ ಸುಮಾರು 30 ಕೆಜಿ ಯೂರಿಯಾ ಗೊಬ್ಬರ ಲಭಿಸಿದಂತಾಗಿದೆ.ಈ ಮಾತು 100 ರಷ್ಟು ಸತ್ಯಾ ಈ ಮಾತನ್ನು ನಾನು ಹೇಳುತ್ತಿಲ್ಲ ನಮ್ಮ ಪರಂಪರೆ ಮತ್ತು ವಿಜ್ಞಾನ ಹೇಳುತ್ತದೆ

ಪಾರಂಪರಿಕವಾಗಿ ನಮ್ಮ ಹಿರಿಯರು ಹೇಳುತ್ತಿದ್ದರು ರೋಣಿ ಮಳೆಯಾದರೆ ಓಣಿ ತುಂಬಾ ಕಾಳು ಎಂದು .
ಈ ಮಾತು ನಿಜ ಇದರಲ್ಲಿ ವಿಜ್ಞಾನವಿದೆ. ವಾತಾವರಣದಲ್ಲಿ ಶೇಕಡಾ 75 ಭಾಗ ಸಾರಜನಕ ಇದೆ 21ಭಾಗ ಆಮ್ಲಜನಕ ಇದೆ ಇವು ಎರೆಡರ ಮದ್ಯೆ ಮಿಂಚು ಬಂದರೆ ಅದು ನೈಟ್ರೇಟ್ ಆಮ್ಲವಾಗಿ ಬದಲಾಗುತ್ತದೆ ಆ ಆಮ್ಲ ಮಳೆ ನೀರಿನಲ್ಲಿ ಬೆರೆತರೆ ಅವುಗಳ ನಡುವೆ ರಾಸಾಯನಿಕ ಕ್ರಿಯೆ ನೆಡೆದು ಆರ್ಗ್ಯಾನಿಕ್ ನೈಟ್ರೋಜನ್ (ಸಾವಯವ ಸಾರಜನಕ) ಅಂದರೆ ನಾವು ಅಂಗಡಿಗಳಿಂದ ತರುವ ಯೂರಿಯಾ ಗೊಬ್ಬರ ಮಳೆ ನೀರಿನಲ್ಲಿ ಬೆರೆತು ಭೂಮಿಗೆ ಒದಗುತ್ತದೆ .

ಯಾರ ಭೂಮಿಯಲ್ಲಿ ಸಾವಯವ ಇಂಗಾಲ ಇದೆಯೋ ಅಥವಾ ನೀರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಇದೆಯೋ ಅಂಥವರ ಭೂಮಿಗೆ ಮೇಲೆ ಹೇಳಿದ ಹಾಗೆ ಪ್ರತಿ ಎಕರೆಗೆ 30 ಕೆಜಿ ಯೂರಿಯಾ ದೊರಕುತ್ತದೆ.

ಹಾಗಾಗಿ ರೈತ ಮಿತ್ರರಲ್ಲಿ ಒಂದು ವಿನಂತಿ ನಮ್ಮ ಜಮೀನಿನಲ್ಲಿ ಇಂಗಾಲದ ಪ್ರಮಾಣವನ್ನು ಹೆಚ್ಚಿಸಲು ಅಥವಾ ನೀರು ಹಿಡಿದು ಇಟ್ಟುಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಆದಷ್ಟು ರಾಸಾಯನಿಕ ಬಳಕೆ ಕಡಿಮೆ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

24 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

1 day ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago