Advertisement
ಸುದ್ದಿಗಳು

ಬೆಳೆಗಳಿಗೆ ಶಕ್ತಿಯ ಸಾರ ಮೊದಲ ಮಳೆ, ಗುಡುಗು, ಸಿಡಿಲು | ನೈಸರ್ಗಿಕವಾಗಿ ಸಿಗುತ್ತದೆ ಭರಪೂರ ಇಂಗಾಲ, ಸಾರಜನಕ

Share

ಇತ್ತೀಚಿನ ಡಿಜಿಟಲ್ ಯುಗದಲ್ಲಿ  ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ಬಗೆಯ ಮಾಹಿತಿಗಳು ರೈತರಿಗೆ ಲಭ್ಯವಾಗುತ್ತದೆ. ಅದರಲ್ಲೂ ವಾಟ್ಸ್ ಅಪ್ ಗಳಲ್ಲಿ ಅನೇಕ ರೈತರ ತಮ್ಮ ಕೃಷಿ ಅನುಭವ, ತಾವು‌ ಮಾಡುವ ಕೃಷಿ, ತಾವು ಬಳಸುವ ಗೊಬ್ಬರ, ಸಾವಯವ ಕೃಷಿ, ವೈಜ್ಞಾನಿಕ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ. ಹೀಗೆ ವಾಟ್ಸ್ ಆಪ್ ನಲ್ಲಿ ಕೃಷಿಕರೊಬ್ಬರು ಹಂಚಿಕೊಂಡ ಮಾಹಿತಿಯನ್ನು ನೀವು ಓದಿ ನೋಡಿ.

ಇಂದು ನಮ್ಮ ಊರಿನಲ್ಲಿ ಗುಡುಗು ಮಿಂಚು ಸಮೇತ 2 ಗಂಟೆ ಬಾರಿ ಮಳೆ ಬಂದಿದೆ. ಅದರ ಪರಿಣಾಮವಾಗಿ ನಮ್ಮ ಭೂಮಿಗೆ ಪ್ರತಿ ಎಕರೆಗೆ ಸುಮಾರು 30 ಕೆಜಿ ಯೂರಿಯಾ ಗೊಬ್ಬರ ಲಭಿಸಿದಂತಾಗಿದೆ.ಈ ಮಾತು 100 ರಷ್ಟು ಸತ್ಯಾ ಈ ಮಾತನ್ನು ನಾನು ಹೇಳುತ್ತಿಲ್ಲ ನಮ್ಮ ಪರಂಪರೆ ಮತ್ತು ವಿಜ್ಞಾನ ಹೇಳುತ್ತದೆ

ಪಾರಂಪರಿಕವಾಗಿ ನಮ್ಮ ಹಿರಿಯರು ಹೇಳುತ್ತಿದ್ದರು ರೋಣಿ ಮಳೆಯಾದರೆ ಓಣಿ ತುಂಬಾ ಕಾಳು ಎಂದು .
ಈ ಮಾತು ನಿಜ ಇದರಲ್ಲಿ ವಿಜ್ಞಾನವಿದೆ. ವಾತಾವರಣದಲ್ಲಿ ಶೇಕಡಾ 75 ಭಾಗ ಸಾರಜನಕ ಇದೆ 21ಭಾಗ ಆಮ್ಲಜನಕ ಇದೆ ಇವು ಎರೆಡರ ಮದ್ಯೆ ಮಿಂಚು ಬಂದರೆ ಅದು ನೈಟ್ರೇಟ್ ಆಮ್ಲವಾಗಿ ಬದಲಾಗುತ್ತದೆ ಆ ಆಮ್ಲ ಮಳೆ ನೀರಿನಲ್ಲಿ ಬೆರೆತರೆ ಅವುಗಳ ನಡುವೆ ರಾಸಾಯನಿಕ ಕ್ರಿಯೆ ನೆಡೆದು ಆರ್ಗ್ಯಾನಿಕ್ ನೈಟ್ರೋಜನ್ (ಸಾವಯವ ಸಾರಜನಕ) ಅಂದರೆ ನಾವು ಅಂಗಡಿಗಳಿಂದ ತರುವ ಯೂರಿಯಾ ಗೊಬ್ಬರ ಮಳೆ ನೀರಿನಲ್ಲಿ ಬೆರೆತು ಭೂಮಿಗೆ ಒದಗುತ್ತದೆ .

ಯಾರ ಭೂಮಿಯಲ್ಲಿ ಸಾವಯವ ಇಂಗಾಲ ಇದೆಯೋ ಅಥವಾ ನೀರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಇದೆಯೋ ಅಂಥವರ ಭೂಮಿಗೆ ಮೇಲೆ ಹೇಳಿದ ಹಾಗೆ ಪ್ರತಿ ಎಕರೆಗೆ 30 ಕೆಜಿ ಯೂರಿಯಾ ದೊರಕುತ್ತದೆ.

ಹಾಗಾಗಿ ರೈತ ಮಿತ್ರರಲ್ಲಿ ಒಂದು ವಿನಂತಿ ನಮ್ಮ ಜಮೀನಿನಲ್ಲಿ ಇಂಗಾಲದ ಪ್ರಮಾಣವನ್ನು ಹೆಚ್ಚಿಸಲು ಅಥವಾ ನೀರು ಹಿಡಿದು ಇಟ್ಟುಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಆದಷ್ಟು ರಾಸಾಯನಿಕ ಬಳಕೆ ಕಡಿಮೆ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

3 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

3 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

11 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

17 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

17 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

1 day ago