ಖಾಸಗಿ ಆಡಳಿತದ ದೇವಾಲಯಗಳಲ್ಲಿ ಭಾರತೀಯ ವಸ್ತ್ರ ಸಂಹಿತೆ ಜಾರಿ | ನಿಯಮ ಮೀರಿದ್ರೆ ಸಿಗಲ್ಲ ಮಂಗಳಾರತಿ, ಪ್ರಸಾದ..!

January 11, 2024
12:57 PM

ದಿನದಿಂದ ದಿನಕ್ಕೆ ನಮ್ಮ ಯುವಜನತೆ(youth) ಪಾಶ್ಚಿಮಾತ್ಯ ಸಂಸ್ಕೃತಿಯತ್ತ(western culture) ಹೆಚ್ಚು ವಾಲುತ್ತಿದ್ದಾರೆ. ಅದರಲ್ಲೂ ನಮ್ಮ ದೇವಾಲಯಗಳಿಗೆ ಬರುವಾಗ ಯಾವ ರೀತಿಯ ವಸ್ತ್ರ(Dress) ಧರಿಸಬೇಕು ಅನ್ನುವ  ಜ್ಞಾನವೂ ಇರುವುದಿಲ್ಲ. ಇದೀಗ ರಾಜ್ಯದ ಖಾಸಗಿ ಆಡಳಿತದ ದೇವಾಲಯಗಳಲ್ಲಿ ಇನ್ಮುಂದೆ ಡ್ರೆಸ್ ಕೋಡ್ (Dress Code in Temple) ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ 800 ದೇವಾಲಯಗಳ ಪೈಕಿ 500ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮುಂದಿನ ಒಂದು ತಿಂಗಳು, ದೇಗುಲದ ಆಡಳಿತ ಮಂಡಳಿಯೇ ಈ ಬಗ್ಗೆ ಜಾಗೃತಿ(Awareness) ಮೂಡಿಸಲಿದೆ.

Advertisement

ಆದರೆ ಮತ್ತೆ ಹಿಂದಿನ ರೀತಿಯೇ ಸಾರ್ವಜನಿಕರು ನಡೆದುಕೊಂಡರೆ, ಅಂತವರಿಗೆ ದೇವಾಲಯದ ಕೆಲ ಆಚರಣೆಗಳನ್ನ ನೀಡದಿರಲು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಭಾ ಚಿಂತನೆ ನಡೆಸುತ್ತಿದೆ. ಹೌದು, ಇತ್ತೀಚಿನ ದಿನಗಳಲ್ಲಿ ಪಾಶ್ಚಿಮಾತ್ಯ ಉಡುಪುಗಳನ್ನ ಧರಿಸಿ ಬರುವುದನ್ನ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ. ನಿಯಮ ಮೀರಿದ್ರೆ ಮಂಗಳಾರತಿ ಮತ್ತು ಪ್ರಸಾದ ನೀಡದಿರಲು ಪ್ಲ್ಯಾನ್ ಮಾಡಲಾಗ್ತಿದೆ. ಎಲ್ಲಾ ದೇವಾಲಯಗಳಲ್ಲೂ ಬೋರ್ಡ್‍ಗಳನ್ನ ಹಾಕಿ ಜಾಗೃತಿ ಮೂಡಿಸೋದಲ್ಲದೆ ಮೌಖಿಕವಾಗಿ ತಿಳಿ ಹೇಳುವ ಕೆಲಸಕ್ಕೆ ಮುಂದಾಗ್ತಿದೆ. ಈ ಹಿಂದೆ ವೈಕುಂಠ ಏಕಾದಶಿ ವೇಳೆ ಇದೇ ರೀತಿಯ ನಿಯಮಗಳನ್ನ ಕೆಲ ದೇವಾಲಯಗಳಲ್ಲಿ ಜಾರಿಗೆ ತರಲಾಗಿತ್ತು. ಈಗ ಎಲ್ಲಾ ದೇವಾಲಯದಲ್ಲೂ ಅಭಿಯಾನ ಆರಂಭಿಸಲಾಗಿದೆ.

ಹೊರ ದೇಶ ಅಥವಾ ಹೊರ ಭಾಗಗಳಿಂದ ಬರುವ ಭಕ್ತರನ್ನು ಗಮನದಲ್ಲಿಟ್ಟುಕೊಂಡು ದೇವಾಲಯದ ವತಿಯಿಂದಲೇ ಬಟ್ಟೆಗಳನ್ನು ನೀಡಲಿದ್ದಾರೆ. ಬಾಡಿಗೆ ಬಟ್ಟೆಗಳನ್ನ ಪಡೆದು ದೇವರ ದರ್ಶನ ಪಡೆದು ನಂತರ ಆ ಬಟ್ಟೆಗಳನ್ನ ದೇವಾಲಯದ ಕೌಂಟರ್‍ನಲ್ಲೇ ವಾಪಸ್ ನೀಡಬೇಕು. ಒಬ್ಬರು ಧರಿಸಿದ ಬಟ್ಟೆಯನ್ನ ಮತ್ತೊಬ್ಬರು ಧರಿಸುವ ಮುನ್ನ, ಶುದ್ದವಾಗಿ ಒಗೆಯಲು ಕೂಡ ದೇವಾಸ್ಥಾನದ ಆಡಳಿತ ಮಂಡಳಿಗಳು ಸಿದ್ಧತೆ ನಡೆಸಿವೆ. ಒಟ್ಟಾರೆ ಸದ್ಯ ಖಾಸಗಿ ಆಡಳಿತ ಮಂಡಳಿಯ ರಾಜ್ಯದ 800ಕ್ಕೂ ಹೆಚ್ಚು ದೇವಾಲಯಗಳಲ್ಲಿ ಸದ್ಯ ಇದೇ ರೂಲ್ಸ್ ಜಾರಿಗೆ ತರಲು ಯೋಜನೆ ರೂಪಿಸಲಾಗಿದೆ. ಒಂದು ತಿಂಗಳ ಅಭಿಯಾನದ ಬಳಿಕ ಈರೂಲ್ಸ್‍ಗಳನ್ನ ಜಾರಿಗೆ ತರುವ ಸಾಧ್ಯತೆ ಇದೆ.

  • ಅಂತರ್ಜಾಲ ಮಾಹಿತಿ

It has been decided to make Dress Code in Temple mandatory from now on in private temples of the state. Already in more than 500 temples out of 800 temples in the state, including Bangalore, the management board of the temple will create awareness about this in the next one month.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹುಲಿಸಂರಕ್ಷಿತ ಪ್ರದೇಶಲ್ಲಿ ರಾತ್ರಿ ಸಂಚಾರ ನಿಷೇಧ | ನಿಷೇಧ ತೆರವುಗೊಳಿಸದಂತೆ ಒತ್ತಾಯಿಸಿ ಪ್ರತಿಭಟನೆ
April 7, 2025
6:44 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ನಿರ್ಧಾರ | ಇಂಧನ ಸಚಿವ ಕೆ.ಜೆ.ಜಾರ್ಜ್
April 7, 2025
6:34 AM
by: The Rural Mirror ಸುದ್ದಿಜಾಲ
ದೇಶದ ಜಿಡಿಪಿ 4.5ಲಕ್ಷ ಕೋಟಿ ರೂಪಾಯಿ ಏರಿಕೆ ಸಾಧ್ಯತೆ | ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ
April 7, 2025
6:28 AM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ಗುಡುಗು ಸಹಿತ ಹಗುರ ಮಳೆಯ ಸಾಧ್ಯತೆ | ಹವಾಮಾನ ಇಲಾಖೆ
April 7, 2025
6:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group