Advertisement
MIRROR FOCUS

ಖಾಸಗಿ ಆಡಳಿತದ ದೇವಾಲಯಗಳಲ್ಲಿ ಭಾರತೀಯ ವಸ್ತ್ರ ಸಂಹಿತೆ ಜಾರಿ | ನಿಯಮ ಮೀರಿದ್ರೆ ಸಿಗಲ್ಲ ಮಂಗಳಾರತಿ, ಪ್ರಸಾದ..!

Share

ದಿನದಿಂದ ದಿನಕ್ಕೆ ನಮ್ಮ ಯುವಜನತೆ(youth) ಪಾಶ್ಚಿಮಾತ್ಯ ಸಂಸ್ಕೃತಿಯತ್ತ(western culture) ಹೆಚ್ಚು ವಾಲುತ್ತಿದ್ದಾರೆ. ಅದರಲ್ಲೂ ನಮ್ಮ ದೇವಾಲಯಗಳಿಗೆ ಬರುವಾಗ ಯಾವ ರೀತಿಯ ವಸ್ತ್ರ(Dress) ಧರಿಸಬೇಕು ಅನ್ನುವ  ಜ್ಞಾನವೂ ಇರುವುದಿಲ್ಲ. ಇದೀಗ ರಾಜ್ಯದ ಖಾಸಗಿ ಆಡಳಿತದ ದೇವಾಲಯಗಳಲ್ಲಿ ಇನ್ಮುಂದೆ ಡ್ರೆಸ್ ಕೋಡ್ (Dress Code in Temple) ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ 800 ದೇವಾಲಯಗಳ ಪೈಕಿ 500ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮುಂದಿನ ಒಂದು ತಿಂಗಳು, ದೇಗುಲದ ಆಡಳಿತ ಮಂಡಳಿಯೇ ಈ ಬಗ್ಗೆ ಜಾಗೃತಿ(Awareness) ಮೂಡಿಸಲಿದೆ.

ಆದರೆ ಮತ್ತೆ ಹಿಂದಿನ ರೀತಿಯೇ ಸಾರ್ವಜನಿಕರು ನಡೆದುಕೊಂಡರೆ, ಅಂತವರಿಗೆ ದೇವಾಲಯದ ಕೆಲ ಆಚರಣೆಗಳನ್ನ ನೀಡದಿರಲು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಭಾ ಚಿಂತನೆ ನಡೆಸುತ್ತಿದೆ. ಹೌದು, ಇತ್ತೀಚಿನ ದಿನಗಳಲ್ಲಿ ಪಾಶ್ಚಿಮಾತ್ಯ ಉಡುಪುಗಳನ್ನ ಧರಿಸಿ ಬರುವುದನ್ನ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ. ನಿಯಮ ಮೀರಿದ್ರೆ ಮಂಗಳಾರತಿ ಮತ್ತು ಪ್ರಸಾದ ನೀಡದಿರಲು ಪ್ಲ್ಯಾನ್ ಮಾಡಲಾಗ್ತಿದೆ. ಎಲ್ಲಾ ದೇವಾಲಯಗಳಲ್ಲೂ ಬೋರ್ಡ್‍ಗಳನ್ನ ಹಾಕಿ ಜಾಗೃತಿ ಮೂಡಿಸೋದಲ್ಲದೆ ಮೌಖಿಕವಾಗಿ ತಿಳಿ ಹೇಳುವ ಕೆಲಸಕ್ಕೆ ಮುಂದಾಗ್ತಿದೆ. ಈ ಹಿಂದೆ ವೈಕುಂಠ ಏಕಾದಶಿ ವೇಳೆ ಇದೇ ರೀತಿಯ ನಿಯಮಗಳನ್ನ ಕೆಲ ದೇವಾಲಯಗಳಲ್ಲಿ ಜಾರಿಗೆ ತರಲಾಗಿತ್ತು. ಈಗ ಎಲ್ಲಾ ದೇವಾಲಯದಲ್ಲೂ ಅಭಿಯಾನ ಆರಂಭಿಸಲಾಗಿದೆ.

ಹೊರ ದೇಶ ಅಥವಾ ಹೊರ ಭಾಗಗಳಿಂದ ಬರುವ ಭಕ್ತರನ್ನು ಗಮನದಲ್ಲಿಟ್ಟುಕೊಂಡು ದೇವಾಲಯದ ವತಿಯಿಂದಲೇ ಬಟ್ಟೆಗಳನ್ನು ನೀಡಲಿದ್ದಾರೆ. ಬಾಡಿಗೆ ಬಟ್ಟೆಗಳನ್ನ ಪಡೆದು ದೇವರ ದರ್ಶನ ಪಡೆದು ನಂತರ ಆ ಬಟ್ಟೆಗಳನ್ನ ದೇವಾಲಯದ ಕೌಂಟರ್‍ನಲ್ಲೇ ವಾಪಸ್ ನೀಡಬೇಕು. ಒಬ್ಬರು ಧರಿಸಿದ ಬಟ್ಟೆಯನ್ನ ಮತ್ತೊಬ್ಬರು ಧರಿಸುವ ಮುನ್ನ, ಶುದ್ದವಾಗಿ ಒಗೆಯಲು ಕೂಡ ದೇವಾಸ್ಥಾನದ ಆಡಳಿತ ಮಂಡಳಿಗಳು ಸಿದ್ಧತೆ ನಡೆಸಿವೆ. ಒಟ್ಟಾರೆ ಸದ್ಯ ಖಾಸಗಿ ಆಡಳಿತ ಮಂಡಳಿಯ ರಾಜ್ಯದ 800ಕ್ಕೂ ಹೆಚ್ಚು ದೇವಾಲಯಗಳಲ್ಲಿ ಸದ್ಯ ಇದೇ ರೂಲ್ಸ್ ಜಾರಿಗೆ ತರಲು ಯೋಜನೆ ರೂಪಿಸಲಾಗಿದೆ. ಒಂದು ತಿಂಗಳ ಅಭಿಯಾನದ ಬಳಿಕ ಈರೂಲ್ಸ್‍ಗಳನ್ನ ಜಾರಿಗೆ ತರುವ ಸಾಧ್ಯತೆ ಇದೆ.

  • ಅಂತರ್ಜಾಲ ಮಾಹಿತಿ

It has been decided to make Dress Code in Temple mandatory from now on in private temples of the state. Already in more than 500 temples out of 800 temples in the state, including Bangalore, the management board of the temple will create awareness about this in the next one month.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago