Advertisement
MIRROR FOCUS

ಖಾಸಗಿ ಆಡಳಿತದ ದೇವಾಲಯಗಳಲ್ಲಿ ಭಾರತೀಯ ವಸ್ತ್ರ ಸಂಹಿತೆ ಜಾರಿ | ನಿಯಮ ಮೀರಿದ್ರೆ ಸಿಗಲ್ಲ ಮಂಗಳಾರತಿ, ಪ್ರಸಾದ..!

Share

ದಿನದಿಂದ ದಿನಕ್ಕೆ ನಮ್ಮ ಯುವಜನತೆ(youth) ಪಾಶ್ಚಿಮಾತ್ಯ ಸಂಸ್ಕೃತಿಯತ್ತ(western culture) ಹೆಚ್ಚು ವಾಲುತ್ತಿದ್ದಾರೆ. ಅದರಲ್ಲೂ ನಮ್ಮ ದೇವಾಲಯಗಳಿಗೆ ಬರುವಾಗ ಯಾವ ರೀತಿಯ ವಸ್ತ್ರ(Dress) ಧರಿಸಬೇಕು ಅನ್ನುವ  ಜ್ಞಾನವೂ ಇರುವುದಿಲ್ಲ. ಇದೀಗ ರಾಜ್ಯದ ಖಾಸಗಿ ಆಡಳಿತದ ದೇವಾಲಯಗಳಲ್ಲಿ ಇನ್ಮುಂದೆ ಡ್ರೆಸ್ ಕೋಡ್ (Dress Code in Temple) ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ 800 ದೇವಾಲಯಗಳ ಪೈಕಿ 500ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮುಂದಿನ ಒಂದು ತಿಂಗಳು, ದೇಗುಲದ ಆಡಳಿತ ಮಂಡಳಿಯೇ ಈ ಬಗ್ಗೆ ಜಾಗೃತಿ(Awareness) ಮೂಡಿಸಲಿದೆ.

ಆದರೆ ಮತ್ತೆ ಹಿಂದಿನ ರೀತಿಯೇ ಸಾರ್ವಜನಿಕರು ನಡೆದುಕೊಂಡರೆ, ಅಂತವರಿಗೆ ದೇವಾಲಯದ ಕೆಲ ಆಚರಣೆಗಳನ್ನ ನೀಡದಿರಲು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಭಾ ಚಿಂತನೆ ನಡೆಸುತ್ತಿದೆ. ಹೌದು, ಇತ್ತೀಚಿನ ದಿನಗಳಲ್ಲಿ ಪಾಶ್ಚಿಮಾತ್ಯ ಉಡುಪುಗಳನ್ನ ಧರಿಸಿ ಬರುವುದನ್ನ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ. ನಿಯಮ ಮೀರಿದ್ರೆ ಮಂಗಳಾರತಿ ಮತ್ತು ಪ್ರಸಾದ ನೀಡದಿರಲು ಪ್ಲ್ಯಾನ್ ಮಾಡಲಾಗ್ತಿದೆ. ಎಲ್ಲಾ ದೇವಾಲಯಗಳಲ್ಲೂ ಬೋರ್ಡ್‍ಗಳನ್ನ ಹಾಕಿ ಜಾಗೃತಿ ಮೂಡಿಸೋದಲ್ಲದೆ ಮೌಖಿಕವಾಗಿ ತಿಳಿ ಹೇಳುವ ಕೆಲಸಕ್ಕೆ ಮುಂದಾಗ್ತಿದೆ. ಈ ಹಿಂದೆ ವೈಕುಂಠ ಏಕಾದಶಿ ವೇಳೆ ಇದೇ ರೀತಿಯ ನಿಯಮಗಳನ್ನ ಕೆಲ ದೇವಾಲಯಗಳಲ್ಲಿ ಜಾರಿಗೆ ತರಲಾಗಿತ್ತು. ಈಗ ಎಲ್ಲಾ ದೇವಾಲಯದಲ್ಲೂ ಅಭಿಯಾನ ಆರಂಭಿಸಲಾಗಿದೆ.

ಹೊರ ದೇಶ ಅಥವಾ ಹೊರ ಭಾಗಗಳಿಂದ ಬರುವ ಭಕ್ತರನ್ನು ಗಮನದಲ್ಲಿಟ್ಟುಕೊಂಡು ದೇವಾಲಯದ ವತಿಯಿಂದಲೇ ಬಟ್ಟೆಗಳನ್ನು ನೀಡಲಿದ್ದಾರೆ. ಬಾಡಿಗೆ ಬಟ್ಟೆಗಳನ್ನ ಪಡೆದು ದೇವರ ದರ್ಶನ ಪಡೆದು ನಂತರ ಆ ಬಟ್ಟೆಗಳನ್ನ ದೇವಾಲಯದ ಕೌಂಟರ್‍ನಲ್ಲೇ ವಾಪಸ್ ನೀಡಬೇಕು. ಒಬ್ಬರು ಧರಿಸಿದ ಬಟ್ಟೆಯನ್ನ ಮತ್ತೊಬ್ಬರು ಧರಿಸುವ ಮುನ್ನ, ಶುದ್ದವಾಗಿ ಒಗೆಯಲು ಕೂಡ ದೇವಾಸ್ಥಾನದ ಆಡಳಿತ ಮಂಡಳಿಗಳು ಸಿದ್ಧತೆ ನಡೆಸಿವೆ. ಒಟ್ಟಾರೆ ಸದ್ಯ ಖಾಸಗಿ ಆಡಳಿತ ಮಂಡಳಿಯ ರಾಜ್ಯದ 800ಕ್ಕೂ ಹೆಚ್ಚು ದೇವಾಲಯಗಳಲ್ಲಿ ಸದ್ಯ ಇದೇ ರೂಲ್ಸ್ ಜಾರಿಗೆ ತರಲು ಯೋಜನೆ ರೂಪಿಸಲಾಗಿದೆ. ಒಂದು ತಿಂಗಳ ಅಭಿಯಾನದ ಬಳಿಕ ಈರೂಲ್ಸ್‍ಗಳನ್ನ ಜಾರಿಗೆ ತರುವ ಸಾಧ್ಯತೆ ಇದೆ.

  • ಅಂತರ್ಜಾಲ ಮಾಹಿತಿ

It has been decided to make Dress Code in Temple mandatory from now on in private temples of the state. Already in more than 500 temples out of 800 temples in the state, including Bangalore, the management board of the temple will create awareness about this in the next one month.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

4 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

4 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

5 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

5 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

14 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

18 hours ago