Advertisement

ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿಸರ್ ಎಂ ವಿ ಜನ್ಮದಿನ

Share

ಕುಶಾಲನಗರ ತಾಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್.ಘಟಕ ಹಾಗೂ ವಿಜ್ಞಾನ ಸಂಘದ ವತಿಯಿಂದ ಶಾಲೆಯ ಕನ್ನಡ ಭಾಷಾ ಸಂಘ, ಸಮಾಜ ವಿಜ್ಞಾನ ‌ಸಂಘದ ಆಶ್ರಯದಲ್ಲಿ ಭಾರತ ರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನು ಶಾಲೆಯಲ್ಲಿ ಆಚರಿಸಲಾಯಿತು.

ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳು ಸರ್ ಎಂ.ವಿಶ್ವೇಶ್ವರಯ್ಯ ಅವರ ಸಾಧನೆ ಹಾಗೂ ಅವರು ದೇಶಕ್ಕೆ ಅಪಾರವಾಗಿ ನೀಡಿದ ಕೊಡುಗೆಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿಕೊಂಡು ಅವರ ಆದರ್ಶ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.


ಎಂಜಿನಿಯರಿಂಗ್ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸರ್‌ ಎಂ ವಿಶ್ವೇಶ್ವರಯ್ಯನವರು ನೀಡಿರುವ ಗಣನೀಯ ಕೊಡುಗೆಗಳನ್ನು ವೃತ್ತಿಪರವಾಗಿ ಗೌರವಿಸಲು ಭಾರತ ಸರ್ಕಾರವು ಅವರ ಜನ್ಮದಿನವನ್ನು ಇಂಜಿನಿಯರ್ಸ್ ಡೇ ಎಂದು 1968 ರಲ್ಲಿ ಘೋಷಿಸಿದೆ ಎಂದರು.

ವಿಶ್ವೇಶ್ವರಯ್ಯ ಅವರ ಜೀವನ ಚರಿತ್ರೆ ಹಾಗೂ ಸಾಧನೆ ಕುರಿತು ಮಾಹಿತಿ ನೀಡಿದ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ ,
ಸರ್ ಎಮ್ ವಿ ಎಂದು ಕರೆಯಲ್ಪಡುವ ಸರ್ ಎಂ ವಿಶ್ವೇಶ್ವರಯ್ಯ ಅವರು ನೂರು ವರ್ಷಗಳನ್ನು ಪೂರೈಸಿದ ದಂತಕಥೆಯಂತೆ ಬದುಕಿದ್ದರು, ತಮ್ಮ ಕೊನೆಯವರೆಗೂ ಸಕ್ರಿಯರಾಗಿದ್ದರು. ಸರ್ ಎಂ ವಿ ಅವರ ಜನ್ಮದಿನವನ್ನು ಇಂಜಿನಿಯರ್ಸ್ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.
ಸೆಪ್ಟೆಂಬರ್ 15, 1860 ರಂದು ಕರ್ನಾಟಕದ ಅವಿಭಜಿತ ಕೋಲಾರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಎಂಬ ಸಣ್ಣ ಹಳ್ಳಿಯಲ್ಲಿ ಜನಿಸಿದ ಸರ್ ಎಂ.ವಿಶ್ವೇಶ್ವರಯ್ಯ ಅವರು ಮೊದಲ ಸ್ಥಳೀಯವಾಗಿ ನಿರ್ಮಿಸಲಾದ ಕೃಷ್ಣ ರಾಜ ಸಾಗರ ಅಣೆಕಟ್ಟು, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸ್ಥಾಪನೆ, ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ಪೇಪರ್ ಮಿಲ್ಸ್, ಮೈಸೂರು ಕಬ್ಬಿಣ ಮತ್ತು ಉಕ್ಕು ಲಿಮಿಟೆಡ್ ನಂತರ, ವಿಶ್ವೇಶ್ವರಯ್ಯ ಐರನ್ ಮತ್ತು ಸ್ಟೀಲ್ಸ್ ಲಿಮಿಟೆಡ್ ಸೇರಿದಂತೆ ದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ
ಸಾಧನೆಗಳನ್ನು ಮಾಡುವ ಮೂಲಕ ದೇಶ – ವಿದೇಶಗಳಲ್ಲಿ ಹೆಸರಾಂತ ಇಂಜಿನಿಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು ಎಂದರು.

ಶಿಕ್ಷಕರಾದ ಎಂ.ಟಿ.ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಅನ್ಸಿಲಾ ರೇಖಾ, ವೈ.ಎಂ.ಸರಸ್ವತಿ, ಶಾಲಾ ನಾಯಕಿ ಸಂಜನಾ ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

3 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

12 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

13 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

14 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

17 hours ago