Advertisement
ಅನುಕ್ರಮ

ಇಂಜಿನಿಯರ್ಸ್‌ ಡೇ ನೆನಪು | ಯುವಕರಿಗೆ ಮಾದರಿ ಸರ್‌ ಎಂ ವಿಶ್ವೇಶ್ವರಯ್ಯ |

Share

“ಒಂದು ಕೆಲಸದಲ್ಲಿ ಯಶಸ್ಸು ಗಳಿಸ ಬೇಕಾದರೆ ಮಾಡುವ ಕೆಲಸವನ್ನು ಪ್ರೀತಿಸ ಬೇಕು. ನೆನಪಿಡು , ಒಂದು ರೈಲ್ವೆ ಕ್ರಾಸಿಂಗನ್ನು ಗುಡಿಸುವುದಷ್ಟೇ ನಿನ್ನ ಕೆಲಸವಾದರೂ , ಪ್ರಪಂಚದಲ್ಲೇ ಇಷ್ಟು ಸ್ವಚ್ಛವಾದ ಕ್ರಾಸಿಂಗ್ ಇಲ್ಲ ಎನ್ನುವ ಹಾಗೆ ಅವನ್ನು ಇಟ್ಟುಕೊಳ್ಳುವುದು ನಿನ್ನ ಕರ್ತವ್ಯ. ”
ಈ ಮಾತು ಹೇಳಿದವರು ಒಣಮಾತಿನ ಭಾಷಣಗಾರರಲ್ಲ. ಅಥವಾ ಕೇವಲ ಬುದ್ಧಿ ಮಾತು ಹೇಳುತ್ತಾ ಹೊತ್ತು ಕಳೆಯಲು ಹೇಳಿದ್ದೂ ಅಲ್ಲ.. ನಿಜವಾದ ದೇಶಪ್ರೇಮಿ, ತನ್ನ ಜೀವಿತಾವಧಿಯಲ್ಲಿ ದೇಶದ ಒಳಿತಿನ ಬಗ್ಗೆಯೇ ಯೋಚಿಸಿದ , ಯೋಜಿಸಿದ, ಯಶಸ್ವಿ ನ ಕುರಿತೇ ರಾತ್ರಿ ಹಗಲೆನ್ನದೆ ಚಿಂತಿಸಿ ಕಾರ್ಯೋನ್ಮುಖರಾದ ವ್ಯಕ್ತಿ, ಅಲ್ಲ ಶಕ್ತಿ ಅವರು ಹೇಳಿದ ಮಾತಿದು. ಸರ್. ಎಂ. ವಿಶ್ವೇಶ್ವರಯ್ಯ ಪೂರ್ಣ ಹೆಸರು ಮೋಕ್ಷ ಗುಂಡಂ ವಿಶ್ವೇಶ್ವರಯ್ಯ.

1891 ಸೆಪ್ಟೆಂಬರ್ 15 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಜನಿಸಿದರು. ಇವರ ತಂದೆ ಶ್ರೀ ನಿವಾಸ ಶಾಸ್ತ್ರಿ ಗಳು, ತಾಯಿ ವೆಂಕಾಚಮ್ಮ.
ಸರ್ , ಎಮ್ ವಿ ಯವರು ಕನಸು ಕಾಣುವುದನ್ನು ಯುವಜನತೆಗೆ ಹೇಳಿಕೊಟ್ಟರು. ಅದೂ ಎಷ್ಟು ಅದ್ವೈತ ವಾದ ದೊಡ್ಡ ದೊಡ್ಡ ಯೋಜನೆಗಳ ಕನಸು. ದೇಶದ ಅಭಿವೃದ್ಧಿ ಯೋಜನೆಗಳ ಕನಸು. ನೀರಿನ ವ್ಯವಸ್ಥೆಯೇ ಇರಲಿ , ಬೆಳಕಿನ ಯೋಜನೆಗಳೇ ಇರಲಿ, ದೇಶದ ಕೃಷಿ ಕ್ಷೇತ್ರದಲ್ಲೇ ಆಗಿರಲಿ ನಮ್ಮ ದೇಶ ಕಂಡರಿಯದಂತಹ ಬದಲಾವಣೆಯ ಹರಿಕಾರ ಸರ್ ಎಂ ವಿಶ್ವೇಶ್ವರಯ್ಯ ರವರು.

ದೇಶದ ಅಭಿವೃದ್ಧಿ ಯಾಗ ಬೇಕಾದರೆ ಶಿಕ್ಣಣ ಕ್ಷೇತ್ರ ಪ್ರಾಮುಖ್ಯತೆಯನ್ನು ಮನಗಂಡು ಸಾವಿರಾರು ಶಾಲೆಗಳನ್ನು ಆರಂಭಿಸು ಅಗತ್ಯವನ್ನು ಸರಕಾರದ ಗಮನಕ್ಕೆ ತಂದು ಕಾರ್ಯರೂಪಕ್ಕೆ  ಬರುವಂತೆ ಮಾಡಿದವರು. ಕಾಲೇಜುಗಳ, ವಿಶ್ವವಿದ್ಯಾಲಯಗಳು, ತಾಂತ್ರಿಕ, ಕೃಷಿ ಮಹಾವಿದ್ಯಾಲಯಗಳ ಸ್ಥಾಪನರಯಲ್ಲೂ ಅಪಾರ ಶ್ರಮ ವಹಿಸಿವರು. ಸಾಮಾನ್ಯ ಮನುಷ್ಯನಿಗೆ ಊಹಿಸಲೂ ಸಾದ್ಯವಿಲ್ಲ ದಷ್ಟು ಕೊಡುಗೆಗಳನ್ನು ಸಮಾಜಕ್ಕೆ ಕೊಟ್ಟ ಧೀಮಂತ ನಾಯಕ ಸರ್. ಎಂ. ವಿಶ್ವೇಶ್ವರಯ್ಯರವರು.

ತಮ್ಮ ಕೆಲಸ ಕಾರ್ಯಗಳಲ್ಲಿ ಅವರು ಎಷ್ಟು ಶಿಸ್ತು ಬಧ್ದರಾಗಿದ್ದರೋ ಅಷ್ಟೇ ಶಿಸ್ತು ಅವರ ನಡೆ, ನುಡಿ, ಧಿರಿಸುಗಳಲ್ಲೂ ಕಾಣಬಹುದಿತ್ತು. ಸಮಯಪಾಲನೆಯಲ್ಲೂ ಎತ್ತಿದ ಕೈ. ಯಾವುದೇ ಕೆಲಸಗಳಾದರೂ ಪೂರ್ವ ತಯಾರಿ ಇಲ್ಲದೆ ಮಾಡಲಾರರು. ಪ್ರತಿಯೊಂದು ವಿಷಯಗಳ ಸಾಧಕಬಾಧಕಗಳ ಲೆಕ್ಕಾಚಾರದ ಮೇಲೆಯೇ ಮುಂದಡಿಯಿಡುವುದು ಅವರ ಗುಣವಾಗಿತ್ತು. ದೇಶಸೇವೆಯನ್ನೇ ತಪಸ್ಸಾಗಿ ಮಾಡಿಕೊಂಡಿದ್ದ ಈ ಮಹಾನುಭಾವ ನ ಹುಟ್ಟಿದ ದಿನ ಸೆಪ್ಟೆಂಬರ್ 15 ನ್ನು ಎಂಜಿನಿಯರ್ಸ್ ಡೇ ಎಂದು ದೇಶದೆಲ್ಲೆಡೆ ಆಚರಿಸಲಾಗುತ್ತದೆ.

ಕೈಗಾರಿಕೀಕರಣ ಹೊಂದಿ ಇಲ್ಲವೇ ನಾಶವಾಗಿ ಎಂದು ದೇಶಕ್ಕೆ ಕರೆಕೊಟ್ಟ ಸರ್.ಎಂ ವಿ, ಭಾರತ ಕಂಡ ಶ್ರೇಷ್ಠ ಸಿವಿಲ್ ಇಂಜಿನಿಯರ್, ಅಣೆಕಟ್ಟು ನಿರ್ಮಾತೃ, ಅರ್ಥಶಾಸ್ತ್ರಜ್ಞ, ದಿವಾನರಾಗಿ ಗುರುತಿಸಿಕೊಂಡಿದ್ದರು, ಮಾತ್ರವಲ್ಲದೇ ದೇಶ ಕಟ್ಟುವ ನಿಟ್ಟಿನಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು
ಅರ್ಹವಾಗಿಯೇ ಭಾರತರತ್ನ ಪ್ರಶಸ್ತಿಯನ್ನು 1955 ರಲ್ಲಿ ಭಾರತ ಸರ್ಕಾರ ಕೊಟ್ಟು ಗೌರವಿಸಿದೆ.

ಮ್ಮ ದೇಶದ ಶಾಪ ಎಂದರೆ ಸೋಮಾರಿತನ. ಅದನ್ನು ಓಡಿಸದೆ ದೇಶ ಅಭಿವೃದ್ಧಿ ಯೆಡೆಗೆ ಮುನ್ನಡೆಯದು ಎಂದು ಯುವಜನತೆಗೆ ಸದಾ ಎಚ್ಚರಿಕೆಯನ್ನು ತಮ್ಮ ಕಾರ್ಯದ ಮೂಲಕ ಮಾಡಿ ತೋರಿಸಿದ ಸರ್ ಎಂ. ವಿಶ್ವೇಶ್ವರಯ್ಯ ರವರಿಗೆ ಶಿರಬಾಗಿ ನಮಿಸೋಣ. 

#ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

8 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

9 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago