Advertisement
Opinion

ತಿಳಿಯಿರಿ… ತೆಂಗಿನಕಾಯಿಯ ಔಷಧೀಯ ಗುಣಗಳು ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುತ್ತವೆ

Share

ತೆಂಗಿನಕಾಯಿ(coconut) ಒಂದು ಹಣ್ಣು. ತೆಂಗಿನಕಾಯಿಯಲ್ಲಿ ಹಲವಾರು ಔಷಧೀಯ(medicinal) ಗುಣಗಳಿವೆ. ಹಸಿ ತೆಂಗಿನಕಾಯಿಯ ತಿರುಳನ್ನು ಸೌಂದರ್ಯವರ್ಧಕಗಳಲ್ಲಿಯೂ(bueaty) ಬಳಸಲಾಗುತ್ತದೆ. ತೆಂಗಿನ ನೀರು(coconut water) ಆರೋಗ್ಯಕ್ಕೆ ಪೌಷ್ಟಿಕವಾಗಿದೆ. ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು, ಖನಿಜಗಳು, ವಿಟಮಿನ್‌ಗಳಂತಹ ಎಲ್ಲಾ ಪೋಷಕಾಂಶಗಳು ತೆಂಗಿನಕಾಯಿಯಿಂದ ಸಿಗುತ್ತವೆ. ಊಟದ ಬದಲಿಯಾಗಿ ನೀವು ತೆಂಗಿನಕಾಯಿಯನ್ನು ಸಹ ತಿನ್ನಬಹುದು. ತೆಂಗಿನಕಾಯಿಯಲ್ಲಿ ಫೈಬರ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ.

– ಅಜೀರ್ಣ, ಹೊಟ್ಟೆ ಉರಿಯಿಂದ ಬಳಲುತ್ತಿರುವವರಿಗೆ ತೆಂಗಿನಕಾಯಿ ಸೇವನೆಯು ಪ್ರಯೋಜನಕಾರಿಯಾಗಿದೆ.                 – ಅನಿಯಮಿತ ಮುಟ್ಟಿನಿಂದ ಬಳಲುತ್ತಿರುವ ಮಹಿಳೆಯರು ಪ್ರತಿದಿನ 10 ಗ್ರಾಂ ಹಸಿ ಕೊಬ್ಬರಿಯನ್ನು ಸೇವಿಸಬೇಕು. ದೇಸಿ ಹಸುವಿನ ಹಾಲನ್ನೂ ಕುಡಿಯಿರಿ. ಮುಟ್ಟಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ.                                                             – ಶೀಘ್ರಸ್ಖಲನದಿಂದ ಬಳಲುತ್ತಿರುವ ಪುರುಷರು ಪ್ರತಿದಿನ ಒಣಕೊಬ್ಬರಿ ಮತ್ತು ಹಸುವಿನ ಹಾಲನ್ನು ಕುಡಿಯುವುದರಿಂದ ವಿಶೇಷವಾಗಿ ಪ್ರಯೋಜನವನ್ನು ಪಡೆಯುತ್ತಾರೆ.

Advertisement
Advertisement

– ತೆಂಗಿನ ನೀರು ಹೊಟ್ಟೆಯ ಅಸ್ವಸ್ಥತೆಗಳನ್ನು ಗುಣಪಡಿಸಲು ಕೆಲಸ ಮಾಡುತ್ತದೆ. ಹುಣ್ಣು ಮುಂತಾದ ಕಾಯಿಲೆ ವಾಸಿಯಾಗುತ್ತದೆ.          – ಮೂತ್ರಪಿಂಡ, ಥೈರಾಯ್ಡ್, ಮಧುಮೇಹ ಮತ್ತು ಮೂತ್ರಕೋಶದ ತೊಂದರೆ ಇರುವವರು ತೆಂಗಿನ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು.                                                                      – ತೆಂಗಿನಕಾಯಿಯು ಜೀರ್ಣಕ್ರಿಯೆಗೆ ಬಹಳ ಪ್ರಯೋಜನಕಾರಿಯಾದ ಅನೇಕ ಜೀವಸತ್ವಗಳನ್ನು ಹೊಂದಿರುತ್ತದೆ. ನಿಮಗೆ ಹೊಟ್ಟೆನೋವು ಅಥವಾ ಗ್ಯಾಸ್ ಇದ್ದರೆ ತೆಂಗಿನ ನೀರು ಕುಡಿಯಿರಿ. ತೆಂಗಿನ ನೀರು ವಾಂತಿಯನ್ನೂ ನಿಲ್ಲಿಸುತ್ತದೆ.

– ತೆಂಗಿನಕಾಯಿ ಕೆಮ್ಮಿಗೆ ಉತ್ತಮ ಪರಿಹಾರವಾಗಿದೆ. ತೆಂಗಿನ ಹಾಲನ್ನು ಒಂದು ಚಮಚ ಗಸಗಸೆ ಮತ್ತು ಒಂದು ಚಮಚ ಜೇನುತುಪ್ಪದೊಂದಿಗೆ ಪ್ರತಿದಿನ ರಾತ್ರಿ ಕುಡಿಯುವುದು ಒಳ್ಳೆಯದು. – ಬಾಯಿಯಲ್ಲಿ ಹುಣ್ಣು ಇದ್ದರೆ, ಹಸಿ ಕೊಬ್ಬರಿಯನ್ನು ಮಾತ್ರ ತಿನ್ನಿರಿ ಮತ್ತು ಸಾಧ್ಯವಾದಷ್ಟು ತೆಂಗಿನ ನೀರನ್ನು ಕುಡಿಯಿರಿ.                      – ತೆಂಗಿನ ಎಣ್ಣೆಯನ್ನು ಪ್ರತಿದಿನ ಚರ್ಮಕ್ಕೆ ಹಚ್ಚುವುದರಿಂದ ತಾಜಾತನದ ಅನುಭವವಾಗುತ್ತದೆ.                                            – ಹುಳಿ ಮೊಸರು, ಜೇಡಿ ಮಣ್ಣು (ಮುಲ್ತಾನಿ ಮಿಟ್ಟಿ) ಮತ್ತು ತೆಂಗಿನ ಎಣ್ಣೆಯ ಮಿಶ್ರಣವು ಕೂದಲನ್ನು ಹೊಳೆಯುವಂತೆ ಮಾಡುತ್ತದೆ.

– ನಿತ್ಯ ಎರಡರಿಂದ ಮೂರು ತೆಂಗಿನ ನೀರನ್ನು ಸೇವಿಸುವುದರಿಂದ ಮುಖ ಕಾಂತಿಯುತವಾಗುತ್ತದೆ.                                                – ಚಳಿಗಾಲದಲ್ಲಿ ಪ್ರತಿ ರಾತ್ರಿ ಒಣ ಕೊಬ್ಬರಿಯನ್ನು ತಿನ್ನಬೇಕು. ರಾತ್ರಿ ಮಲಗುವಾಗ ಕೊಬ್ಬರಿ ಎಣ್ಣೆಯನ್ನು ಮುಖ, ಕುತ್ತಿಗೆ ಮತ್ತು ಚರ್ಮಕ್ಕೆ ಹಚ್ಚಿ ಮತ್ತು ಕೈಗಳಿಂದ ಮೃದುವಾಗಿ ಮಸಾಜ್ ಮಾಡಿ. ಬೆಳಿಗ್ಗೆ ಎದ್ದ ನಂತರ ನಿಮ್ಮ ಮುಖವನ್ನು ನೀರಿನಿಂದ ತೊಳೆಯಿರಿ. ಕೆಲವೇ ದಿನಗಳಲ್ಲಿ ಸುಕ್ಕುಗಳು ಮಾಯವಾಗುತ್ತವೆ.                                  – ಕೊಬ್ಬರಿ ಎಣ್ಣೆಯನ್ನು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿರುವ ಹುಣ್ಣುಗಳು ಮಾಯವಾಗುತ್ತವೆ.

– ಗರ್ಭಿಣಿಯರು ಪ್ರತಿದಿನ ಹಸಿ ಕೊಬ್ಬರಿಯನ್ನು ತಿನ್ನುವುದರಿಂದ ಅವರ ಆರೋಗ್ಯವು ಸದೃಢವಾಗಿರುತ್ತದೆ. ಅಲ್ಲದೆ, ಆರೋಗ್ಯವಂತ ಮಗು ಜನಿಸುತ್ತದೆ.                                                                 – ಬಾದಾಮಿಯನ್ನು ತೆಂಗಿನ ಎಣ್ಣೆಯಲ್ಲಿ ರುಬ್ಬಿಕೊಳ್ಳಿ. ಈ ಎಣ್ಣೆ ತಲೆನೋವಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.                      – ಹೊಟ್ಟೆ ಹುಳುಗಳಿದ್ದರೆ ಪ್ರತಿದಿನ ಬೆಳಗ್ಗೆ ತೆಂಗಿನ ತುರಿ ತಿನ್ನಿ.

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

21 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

22 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

22 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

22 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

22 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

23 hours ago