Opinion

ತಿಳಿಯಿರಿ… ತೆಂಗಿನಕಾಯಿಯ ಔಷಧೀಯ ಗುಣಗಳು ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುತ್ತವೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತೆಂಗಿನಕಾಯಿ(coconut) ಒಂದು ಹಣ್ಣು. ತೆಂಗಿನಕಾಯಿಯಲ್ಲಿ ಹಲವಾರು ಔಷಧೀಯ(medicinal) ಗುಣಗಳಿವೆ. ಹಸಿ ತೆಂಗಿನಕಾಯಿಯ ತಿರುಳನ್ನು ಸೌಂದರ್ಯವರ್ಧಕಗಳಲ್ಲಿಯೂ(bueaty) ಬಳಸಲಾಗುತ್ತದೆ. ತೆಂಗಿನ ನೀರು(coconut water) ಆರೋಗ್ಯಕ್ಕೆ ಪೌಷ್ಟಿಕವಾಗಿದೆ. ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು, ಖನಿಜಗಳು, ವಿಟಮಿನ್‌ಗಳಂತಹ ಎಲ್ಲಾ ಪೋಷಕಾಂಶಗಳು ತೆಂಗಿನಕಾಯಿಯಿಂದ ಸಿಗುತ್ತವೆ. ಊಟದ ಬದಲಿಯಾಗಿ ನೀವು ತೆಂಗಿನಕಾಯಿಯನ್ನು ಸಹ ತಿನ್ನಬಹುದು. ತೆಂಗಿನಕಾಯಿಯಲ್ಲಿ ಫೈಬರ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ.

– ಅಜೀರ್ಣ, ಹೊಟ್ಟೆ ಉರಿಯಿಂದ ಬಳಲುತ್ತಿರುವವರಿಗೆ ತೆಂಗಿನಕಾಯಿ ಸೇವನೆಯು ಪ್ರಯೋಜನಕಾರಿಯಾಗಿದೆ.                 – ಅನಿಯಮಿತ ಮುಟ್ಟಿನಿಂದ ಬಳಲುತ್ತಿರುವ ಮಹಿಳೆಯರು ಪ್ರತಿದಿನ 10 ಗ್ರಾಂ ಹಸಿ ಕೊಬ್ಬರಿಯನ್ನು ಸೇವಿಸಬೇಕು. ದೇಸಿ ಹಸುವಿನ ಹಾಲನ್ನೂ ಕುಡಿಯಿರಿ. ಮುಟ್ಟಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ.                                                             – ಶೀಘ್ರಸ್ಖಲನದಿಂದ ಬಳಲುತ್ತಿರುವ ಪುರುಷರು ಪ್ರತಿದಿನ ಒಣಕೊಬ್ಬರಿ ಮತ್ತು ಹಸುವಿನ ಹಾಲನ್ನು ಕುಡಿಯುವುದರಿಂದ ವಿಶೇಷವಾಗಿ ಪ್ರಯೋಜನವನ್ನು ಪಡೆಯುತ್ತಾರೆ.

Advertisement

– ತೆಂಗಿನ ನೀರು ಹೊಟ್ಟೆಯ ಅಸ್ವಸ್ಥತೆಗಳನ್ನು ಗುಣಪಡಿಸಲು ಕೆಲಸ ಮಾಡುತ್ತದೆ. ಹುಣ್ಣು ಮುಂತಾದ ಕಾಯಿಲೆ ವಾಸಿಯಾಗುತ್ತದೆ.          – ಮೂತ್ರಪಿಂಡ, ಥೈರಾಯ್ಡ್, ಮಧುಮೇಹ ಮತ್ತು ಮೂತ್ರಕೋಶದ ತೊಂದರೆ ಇರುವವರು ತೆಂಗಿನ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು.                                                                      – ತೆಂಗಿನಕಾಯಿಯು ಜೀರ್ಣಕ್ರಿಯೆಗೆ ಬಹಳ ಪ್ರಯೋಜನಕಾರಿಯಾದ ಅನೇಕ ಜೀವಸತ್ವಗಳನ್ನು ಹೊಂದಿರುತ್ತದೆ. ನಿಮಗೆ ಹೊಟ್ಟೆನೋವು ಅಥವಾ ಗ್ಯಾಸ್ ಇದ್ದರೆ ತೆಂಗಿನ ನೀರು ಕುಡಿಯಿರಿ. ತೆಂಗಿನ ನೀರು ವಾಂತಿಯನ್ನೂ ನಿಲ್ಲಿಸುತ್ತದೆ.

– ತೆಂಗಿನಕಾಯಿ ಕೆಮ್ಮಿಗೆ ಉತ್ತಮ ಪರಿಹಾರವಾಗಿದೆ. ತೆಂಗಿನ ಹಾಲನ್ನು ಒಂದು ಚಮಚ ಗಸಗಸೆ ಮತ್ತು ಒಂದು ಚಮಚ ಜೇನುತುಪ್ಪದೊಂದಿಗೆ ಪ್ರತಿದಿನ ರಾತ್ರಿ ಕುಡಿಯುವುದು ಒಳ್ಳೆಯದು. – ಬಾಯಿಯಲ್ಲಿ ಹುಣ್ಣು ಇದ್ದರೆ, ಹಸಿ ಕೊಬ್ಬರಿಯನ್ನು ಮಾತ್ರ ತಿನ್ನಿರಿ ಮತ್ತು ಸಾಧ್ಯವಾದಷ್ಟು ತೆಂಗಿನ ನೀರನ್ನು ಕುಡಿಯಿರಿ.                      – ತೆಂಗಿನ ಎಣ್ಣೆಯನ್ನು ಪ್ರತಿದಿನ ಚರ್ಮಕ್ಕೆ ಹಚ್ಚುವುದರಿಂದ ತಾಜಾತನದ ಅನುಭವವಾಗುತ್ತದೆ.                                            – ಹುಳಿ ಮೊಸರು, ಜೇಡಿ ಮಣ್ಣು (ಮುಲ್ತಾನಿ ಮಿಟ್ಟಿ) ಮತ್ತು ತೆಂಗಿನ ಎಣ್ಣೆಯ ಮಿಶ್ರಣವು ಕೂದಲನ್ನು ಹೊಳೆಯುವಂತೆ ಮಾಡುತ್ತದೆ.

– ನಿತ್ಯ ಎರಡರಿಂದ ಮೂರು ತೆಂಗಿನ ನೀರನ್ನು ಸೇವಿಸುವುದರಿಂದ ಮುಖ ಕಾಂತಿಯುತವಾಗುತ್ತದೆ.                                                – ಚಳಿಗಾಲದಲ್ಲಿ ಪ್ರತಿ ರಾತ್ರಿ ಒಣ ಕೊಬ್ಬರಿಯನ್ನು ತಿನ್ನಬೇಕು. ರಾತ್ರಿ ಮಲಗುವಾಗ ಕೊಬ್ಬರಿ ಎಣ್ಣೆಯನ್ನು ಮುಖ, ಕುತ್ತಿಗೆ ಮತ್ತು ಚರ್ಮಕ್ಕೆ ಹಚ್ಚಿ ಮತ್ತು ಕೈಗಳಿಂದ ಮೃದುವಾಗಿ ಮಸಾಜ್ ಮಾಡಿ. ಬೆಳಿಗ್ಗೆ ಎದ್ದ ನಂತರ ನಿಮ್ಮ ಮುಖವನ್ನು ನೀರಿನಿಂದ ತೊಳೆಯಿರಿ. ಕೆಲವೇ ದಿನಗಳಲ್ಲಿ ಸುಕ್ಕುಗಳು ಮಾಯವಾಗುತ್ತವೆ.                                  – ಕೊಬ್ಬರಿ ಎಣ್ಣೆಯನ್ನು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿರುವ ಹುಣ್ಣುಗಳು ಮಾಯವಾಗುತ್ತವೆ.

– ಗರ್ಭಿಣಿಯರು ಪ್ರತಿದಿನ ಹಸಿ ಕೊಬ್ಬರಿಯನ್ನು ತಿನ್ನುವುದರಿಂದ ಅವರ ಆರೋಗ್ಯವು ಸದೃಢವಾಗಿರುತ್ತದೆ. ಅಲ್ಲದೆ, ಆರೋಗ್ಯವಂತ ಮಗು ಜನಿಸುತ್ತದೆ.                                                                 – ಬಾದಾಮಿಯನ್ನು ತೆಂಗಿನ ಎಣ್ಣೆಯಲ್ಲಿ ರುಬ್ಬಿಕೊಳ್ಳಿ. ಈ ಎಣ್ಣೆ ತಲೆನೋವಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.                      – ಹೊಟ್ಟೆ ಹುಳುಗಳಿದ್ದರೆ ಪ್ರತಿದಿನ ಬೆಳಗ್ಗೆ ತೆಂಗಿನ ತುರಿ ತಿನ್ನಿ.

Advertisement

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

3 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

3 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

3 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

3 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

3 hours ago

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…

3 hours ago