Advertisement
Opinion

ತಿಳಿಯಿರಿ… ತೆಂಗಿನಕಾಯಿಯ ಔಷಧೀಯ ಗುಣಗಳು ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುತ್ತವೆ

Share

ತೆಂಗಿನಕಾಯಿ(coconut) ಒಂದು ಹಣ್ಣು. ತೆಂಗಿನಕಾಯಿಯಲ್ಲಿ ಹಲವಾರು ಔಷಧೀಯ(medicinal) ಗುಣಗಳಿವೆ. ಹಸಿ ತೆಂಗಿನಕಾಯಿಯ ತಿರುಳನ್ನು ಸೌಂದರ್ಯವರ್ಧಕಗಳಲ್ಲಿಯೂ(bueaty) ಬಳಸಲಾಗುತ್ತದೆ. ತೆಂಗಿನ ನೀರು(coconut water) ಆರೋಗ್ಯಕ್ಕೆ ಪೌಷ್ಟಿಕವಾಗಿದೆ. ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು, ಖನಿಜಗಳು, ವಿಟಮಿನ್‌ಗಳಂತಹ ಎಲ್ಲಾ ಪೋಷಕಾಂಶಗಳು ತೆಂಗಿನಕಾಯಿಯಿಂದ ಸಿಗುತ್ತವೆ. ಊಟದ ಬದಲಿಯಾಗಿ ನೀವು ತೆಂಗಿನಕಾಯಿಯನ್ನು ಸಹ ತಿನ್ನಬಹುದು. ತೆಂಗಿನಕಾಯಿಯಲ್ಲಿ ಫೈಬರ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ.

– ಅಜೀರ್ಣ, ಹೊಟ್ಟೆ ಉರಿಯಿಂದ ಬಳಲುತ್ತಿರುವವರಿಗೆ ತೆಂಗಿನಕಾಯಿ ಸೇವನೆಯು ಪ್ರಯೋಜನಕಾರಿಯಾಗಿದೆ.                 – ಅನಿಯಮಿತ ಮುಟ್ಟಿನಿಂದ ಬಳಲುತ್ತಿರುವ ಮಹಿಳೆಯರು ಪ್ರತಿದಿನ 10 ಗ್ರಾಂ ಹಸಿ ಕೊಬ್ಬರಿಯನ್ನು ಸೇವಿಸಬೇಕು. ದೇಸಿ ಹಸುವಿನ ಹಾಲನ್ನೂ ಕುಡಿಯಿರಿ. ಮುಟ್ಟಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ.                                                             – ಶೀಘ್ರಸ್ಖಲನದಿಂದ ಬಳಲುತ್ತಿರುವ ಪುರುಷರು ಪ್ರತಿದಿನ ಒಣಕೊಬ್ಬರಿ ಮತ್ತು ಹಸುವಿನ ಹಾಲನ್ನು ಕುಡಿಯುವುದರಿಂದ ವಿಶೇಷವಾಗಿ ಪ್ರಯೋಜನವನ್ನು ಪಡೆಯುತ್ತಾರೆ.

– ತೆಂಗಿನ ನೀರು ಹೊಟ್ಟೆಯ ಅಸ್ವಸ್ಥತೆಗಳನ್ನು ಗುಣಪಡಿಸಲು ಕೆಲಸ ಮಾಡುತ್ತದೆ. ಹುಣ್ಣು ಮುಂತಾದ ಕಾಯಿಲೆ ವಾಸಿಯಾಗುತ್ತದೆ.          – ಮೂತ್ರಪಿಂಡ, ಥೈರಾಯ್ಡ್, ಮಧುಮೇಹ ಮತ್ತು ಮೂತ್ರಕೋಶದ ತೊಂದರೆ ಇರುವವರು ತೆಂಗಿನ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು.                                                                      – ತೆಂಗಿನಕಾಯಿಯು ಜೀರ್ಣಕ್ರಿಯೆಗೆ ಬಹಳ ಪ್ರಯೋಜನಕಾರಿಯಾದ ಅನೇಕ ಜೀವಸತ್ವಗಳನ್ನು ಹೊಂದಿರುತ್ತದೆ. ನಿಮಗೆ ಹೊಟ್ಟೆನೋವು ಅಥವಾ ಗ್ಯಾಸ್ ಇದ್ದರೆ ತೆಂಗಿನ ನೀರು ಕುಡಿಯಿರಿ. ತೆಂಗಿನ ನೀರು ವಾಂತಿಯನ್ನೂ ನಿಲ್ಲಿಸುತ್ತದೆ.

– ತೆಂಗಿನಕಾಯಿ ಕೆಮ್ಮಿಗೆ ಉತ್ತಮ ಪರಿಹಾರವಾಗಿದೆ. ತೆಂಗಿನ ಹಾಲನ್ನು ಒಂದು ಚಮಚ ಗಸಗಸೆ ಮತ್ತು ಒಂದು ಚಮಚ ಜೇನುತುಪ್ಪದೊಂದಿಗೆ ಪ್ರತಿದಿನ ರಾತ್ರಿ ಕುಡಿಯುವುದು ಒಳ್ಳೆಯದು. – ಬಾಯಿಯಲ್ಲಿ ಹುಣ್ಣು ಇದ್ದರೆ, ಹಸಿ ಕೊಬ್ಬರಿಯನ್ನು ಮಾತ್ರ ತಿನ್ನಿರಿ ಮತ್ತು ಸಾಧ್ಯವಾದಷ್ಟು ತೆಂಗಿನ ನೀರನ್ನು ಕುಡಿಯಿರಿ.                      – ತೆಂಗಿನ ಎಣ್ಣೆಯನ್ನು ಪ್ರತಿದಿನ ಚರ್ಮಕ್ಕೆ ಹಚ್ಚುವುದರಿಂದ ತಾಜಾತನದ ಅನುಭವವಾಗುತ್ತದೆ.                                            – ಹುಳಿ ಮೊಸರು, ಜೇಡಿ ಮಣ್ಣು (ಮುಲ್ತಾನಿ ಮಿಟ್ಟಿ) ಮತ್ತು ತೆಂಗಿನ ಎಣ್ಣೆಯ ಮಿಶ್ರಣವು ಕೂದಲನ್ನು ಹೊಳೆಯುವಂತೆ ಮಾಡುತ್ತದೆ.

– ನಿತ್ಯ ಎರಡರಿಂದ ಮೂರು ತೆಂಗಿನ ನೀರನ್ನು ಸೇವಿಸುವುದರಿಂದ ಮುಖ ಕಾಂತಿಯುತವಾಗುತ್ತದೆ.                                                – ಚಳಿಗಾಲದಲ್ಲಿ ಪ್ರತಿ ರಾತ್ರಿ ಒಣ ಕೊಬ್ಬರಿಯನ್ನು ತಿನ್ನಬೇಕು. ರಾತ್ರಿ ಮಲಗುವಾಗ ಕೊಬ್ಬರಿ ಎಣ್ಣೆಯನ್ನು ಮುಖ, ಕುತ್ತಿಗೆ ಮತ್ತು ಚರ್ಮಕ್ಕೆ ಹಚ್ಚಿ ಮತ್ತು ಕೈಗಳಿಂದ ಮೃದುವಾಗಿ ಮಸಾಜ್ ಮಾಡಿ. ಬೆಳಿಗ್ಗೆ ಎದ್ದ ನಂತರ ನಿಮ್ಮ ಮುಖವನ್ನು ನೀರಿನಿಂದ ತೊಳೆಯಿರಿ. ಕೆಲವೇ ದಿನಗಳಲ್ಲಿ ಸುಕ್ಕುಗಳು ಮಾಯವಾಗುತ್ತವೆ.                                  – ಕೊಬ್ಬರಿ ಎಣ್ಣೆಯನ್ನು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿರುವ ಹುಣ್ಣುಗಳು ಮಾಯವಾಗುತ್ತವೆ.

– ಗರ್ಭಿಣಿಯರು ಪ್ರತಿದಿನ ಹಸಿ ಕೊಬ್ಬರಿಯನ್ನು ತಿನ್ನುವುದರಿಂದ ಅವರ ಆರೋಗ್ಯವು ಸದೃಢವಾಗಿರುತ್ತದೆ. ಅಲ್ಲದೆ, ಆರೋಗ್ಯವಂತ ಮಗು ಜನಿಸುತ್ತದೆ.                                                                 – ಬಾದಾಮಿಯನ್ನು ತೆಂಗಿನ ಎಣ್ಣೆಯಲ್ಲಿ ರುಬ್ಬಿಕೊಳ್ಳಿ. ಈ ಎಣ್ಣೆ ತಲೆನೋವಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.                      – ಹೊಟ್ಟೆ ಹುಳುಗಳಿದ್ದರೆ ಪ್ರತಿದಿನ ಬೆಳಗ್ಗೆ ತೆಂಗಿನ ತುರಿ ತಿನ್ನಿ.

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

7 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

11 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

18 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

18 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago