Advertisement
Opinion

ತಿಳಿಯಿರಿ… ತೆಂಗಿನಕಾಯಿಯ ಔಷಧೀಯ ಗುಣಗಳು ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುತ್ತವೆ

Share

ತೆಂಗಿನಕಾಯಿ(coconut) ಒಂದು ಹಣ್ಣು. ತೆಂಗಿನಕಾಯಿಯಲ್ಲಿ ಹಲವಾರು ಔಷಧೀಯ(medicinal) ಗುಣಗಳಿವೆ. ಹಸಿ ತೆಂಗಿನಕಾಯಿಯ ತಿರುಳನ್ನು ಸೌಂದರ್ಯವರ್ಧಕಗಳಲ್ಲಿಯೂ(bueaty) ಬಳಸಲಾಗುತ್ತದೆ. ತೆಂಗಿನ ನೀರು(coconut water) ಆರೋಗ್ಯಕ್ಕೆ ಪೌಷ್ಟಿಕವಾಗಿದೆ. ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು, ಖನಿಜಗಳು, ವಿಟಮಿನ್‌ಗಳಂತಹ ಎಲ್ಲಾ ಪೋಷಕಾಂಶಗಳು ತೆಂಗಿನಕಾಯಿಯಿಂದ ಸಿಗುತ್ತವೆ. ಊಟದ ಬದಲಿಯಾಗಿ ನೀವು ತೆಂಗಿನಕಾಯಿಯನ್ನು ಸಹ ತಿನ್ನಬಹುದು. ತೆಂಗಿನಕಾಯಿಯಲ್ಲಿ ಫೈಬರ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ.

– ಅಜೀರ್ಣ, ಹೊಟ್ಟೆ ಉರಿಯಿಂದ ಬಳಲುತ್ತಿರುವವರಿಗೆ ತೆಂಗಿನಕಾಯಿ ಸೇವನೆಯು ಪ್ರಯೋಜನಕಾರಿಯಾಗಿದೆ.                 – ಅನಿಯಮಿತ ಮುಟ್ಟಿನಿಂದ ಬಳಲುತ್ತಿರುವ ಮಹಿಳೆಯರು ಪ್ರತಿದಿನ 10 ಗ್ರಾಂ ಹಸಿ ಕೊಬ್ಬರಿಯನ್ನು ಸೇವಿಸಬೇಕು. ದೇಸಿ ಹಸುವಿನ ಹಾಲನ್ನೂ ಕುಡಿಯಿರಿ. ಮುಟ್ಟಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ.                                                             – ಶೀಘ್ರಸ್ಖಲನದಿಂದ ಬಳಲುತ್ತಿರುವ ಪುರುಷರು ಪ್ರತಿದಿನ ಒಣಕೊಬ್ಬರಿ ಮತ್ತು ಹಸುವಿನ ಹಾಲನ್ನು ಕುಡಿಯುವುದರಿಂದ ವಿಶೇಷವಾಗಿ ಪ್ರಯೋಜನವನ್ನು ಪಡೆಯುತ್ತಾರೆ.

– ತೆಂಗಿನ ನೀರು ಹೊಟ್ಟೆಯ ಅಸ್ವಸ್ಥತೆಗಳನ್ನು ಗುಣಪಡಿಸಲು ಕೆಲಸ ಮಾಡುತ್ತದೆ. ಹುಣ್ಣು ಮುಂತಾದ ಕಾಯಿಲೆ ವಾಸಿಯಾಗುತ್ತದೆ.          – ಮೂತ್ರಪಿಂಡ, ಥೈರಾಯ್ಡ್, ಮಧುಮೇಹ ಮತ್ತು ಮೂತ್ರಕೋಶದ ತೊಂದರೆ ಇರುವವರು ತೆಂಗಿನ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು.                                                                      – ತೆಂಗಿನಕಾಯಿಯು ಜೀರ್ಣಕ್ರಿಯೆಗೆ ಬಹಳ ಪ್ರಯೋಜನಕಾರಿಯಾದ ಅನೇಕ ಜೀವಸತ್ವಗಳನ್ನು ಹೊಂದಿರುತ್ತದೆ. ನಿಮಗೆ ಹೊಟ್ಟೆನೋವು ಅಥವಾ ಗ್ಯಾಸ್ ಇದ್ದರೆ ತೆಂಗಿನ ನೀರು ಕುಡಿಯಿರಿ. ತೆಂಗಿನ ನೀರು ವಾಂತಿಯನ್ನೂ ನಿಲ್ಲಿಸುತ್ತದೆ.

– ತೆಂಗಿನಕಾಯಿ ಕೆಮ್ಮಿಗೆ ಉತ್ತಮ ಪರಿಹಾರವಾಗಿದೆ. ತೆಂಗಿನ ಹಾಲನ್ನು ಒಂದು ಚಮಚ ಗಸಗಸೆ ಮತ್ತು ಒಂದು ಚಮಚ ಜೇನುತುಪ್ಪದೊಂದಿಗೆ ಪ್ರತಿದಿನ ರಾತ್ರಿ ಕುಡಿಯುವುದು ಒಳ್ಳೆಯದು. – ಬಾಯಿಯಲ್ಲಿ ಹುಣ್ಣು ಇದ್ದರೆ, ಹಸಿ ಕೊಬ್ಬರಿಯನ್ನು ಮಾತ್ರ ತಿನ್ನಿರಿ ಮತ್ತು ಸಾಧ್ಯವಾದಷ್ಟು ತೆಂಗಿನ ನೀರನ್ನು ಕುಡಿಯಿರಿ.                      – ತೆಂಗಿನ ಎಣ್ಣೆಯನ್ನು ಪ್ರತಿದಿನ ಚರ್ಮಕ್ಕೆ ಹಚ್ಚುವುದರಿಂದ ತಾಜಾತನದ ಅನುಭವವಾಗುತ್ತದೆ.                                            – ಹುಳಿ ಮೊಸರು, ಜೇಡಿ ಮಣ್ಣು (ಮುಲ್ತಾನಿ ಮಿಟ್ಟಿ) ಮತ್ತು ತೆಂಗಿನ ಎಣ್ಣೆಯ ಮಿಶ್ರಣವು ಕೂದಲನ್ನು ಹೊಳೆಯುವಂತೆ ಮಾಡುತ್ತದೆ.

– ನಿತ್ಯ ಎರಡರಿಂದ ಮೂರು ತೆಂಗಿನ ನೀರನ್ನು ಸೇವಿಸುವುದರಿಂದ ಮುಖ ಕಾಂತಿಯುತವಾಗುತ್ತದೆ.                                                – ಚಳಿಗಾಲದಲ್ಲಿ ಪ್ರತಿ ರಾತ್ರಿ ಒಣ ಕೊಬ್ಬರಿಯನ್ನು ತಿನ್ನಬೇಕು. ರಾತ್ರಿ ಮಲಗುವಾಗ ಕೊಬ್ಬರಿ ಎಣ್ಣೆಯನ್ನು ಮುಖ, ಕುತ್ತಿಗೆ ಮತ್ತು ಚರ್ಮಕ್ಕೆ ಹಚ್ಚಿ ಮತ್ತು ಕೈಗಳಿಂದ ಮೃದುವಾಗಿ ಮಸಾಜ್ ಮಾಡಿ. ಬೆಳಿಗ್ಗೆ ಎದ್ದ ನಂತರ ನಿಮ್ಮ ಮುಖವನ್ನು ನೀರಿನಿಂದ ತೊಳೆಯಿರಿ. ಕೆಲವೇ ದಿನಗಳಲ್ಲಿ ಸುಕ್ಕುಗಳು ಮಾಯವಾಗುತ್ತವೆ.                                  – ಕೊಬ್ಬರಿ ಎಣ್ಣೆಯನ್ನು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿರುವ ಹುಣ್ಣುಗಳು ಮಾಯವಾಗುತ್ತವೆ.

– ಗರ್ಭಿಣಿಯರು ಪ್ರತಿದಿನ ಹಸಿ ಕೊಬ್ಬರಿಯನ್ನು ತಿನ್ನುವುದರಿಂದ ಅವರ ಆರೋಗ್ಯವು ಸದೃಢವಾಗಿರುತ್ತದೆ. ಅಲ್ಲದೆ, ಆರೋಗ್ಯವಂತ ಮಗು ಜನಿಸುತ್ತದೆ.                                                                 – ಬಾದಾಮಿಯನ್ನು ತೆಂಗಿನ ಎಣ್ಣೆಯಲ್ಲಿ ರುಬ್ಬಿಕೊಳ್ಳಿ. ಈ ಎಣ್ಣೆ ತಲೆನೋವಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.                      – ಹೊಟ್ಟೆ ಹುಳುಗಳಿದ್ದರೆ ಪ್ರತಿದಿನ ಬೆಳಗ್ಗೆ ತೆಂಗಿನ ತುರಿ ತಿನ್ನಿ.

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

11 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

20 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

20 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago