Advertisement
ಸುದ್ದಿಗಳು

ಬೇಸಿಗೆಯಲ್ಲಿ ನೀರು ಜೊತೆ ಬೆಲ್ಲ ಸವಿಯಿರಿ – ದೇಹಕ್ಕೆ ತಂಪು, ಆರೋಗ್ಯಕ್ಕೂ ಒಳ್ಳೆಯದು

Share

ಸಾಮಾನ್ಯವಾಗಿ ಬೇಸಿಗೆಯಲ್ಲಿ ದಣಿದು ಮನೆಗೆ ಬಂದವರಿಗೆ ಒಂದು ಲೋಟ ನೀರು ಜೊತೆಗೆ ಒಂದು ತುಂಡು ಬೆಲ್ಲ ನೀಡುತ್ತಾರೆ. ಒಂದು ಲೋಟ ನೀರು ಹಾಗೂ ಆ ಬೆಲ್ಲದ ತುಂಡು ತಿಂದ ತಕ್ಷಣ ತುಂಬಾನೇ ರಿಲ್ಯಾಕ್ಸ್ ಅನಿಸುವುದು, ಆಯಾಸವೆಲ್ಲಾ ದೂರಾಗುವುದು ಅಲ್ವಾ?
ನೀವು ಇದುವರೆಗೆ ನೀರು ಹಾಗೂ ಬೆಲ್ಲ ಸೇವಿಸಿಲ್ಲ ಎಂದಾದರೆ ಬಿಸಿಲಿನಲ್ಲಿ ಓಡಾಡಿ ಬಂದಾಗ ಒಂದು ಲೋಟ ನೀರು ಜೊತೆಗೆ ಚಿಕ್ಕ ತುಂಡು ಬೆಲ್ಲ ತಿಂದು ಸುಸ್ತು ಪಟ್ ಅಂತ ಮಾಯಾಗುವುದು.

Advertisement
Advertisement

ಮಲಬದ್ಧತೆ ತಡೆಗಟ್ಟುತ್ತದೆ

ಬೇಸಿಗೆಯಲ್ಲಿ ಕೆಲವರಿಗೆ ದೇಹದಲ್ಲಿ ನೀರಿನಂಶ ಕಡಿಮೆಯಾಗಿ ಮಲಬದ್ಧತೆ ಸಮಸ್ಯೆ ಉಂಟಾಗುವುದು, ಬೆಲ್ಲ ಮಲಬದ್ಧತೆ ಸಮಸ್ಯೆ ತಡೆಗಟ್ಟಲು ಸಹಕಾರಿಯಾಗಿದೆ

Advertisement

ದೇಹದಲ್ಲಿರುವ ಕಲ್ಮಶವನ್ನು ಹೊರಹಾಕುತ್ತದೆ

ಬೆಲ್ಲ ತಿನ್ನುವುದರಿಂದ ದೇಹವನ್ನು ಡಿಟಾಕ್ಸ್ ಮಾಡುತ್ತದೆ, ಇದು ಲಿವರ್ ಅನ್ನು ಕ್ವೆನ್ಸ್ ಮಾಡುವುದರಿಂದ ಲಿವರ್‌ನ ಆರೋಗ್ಯ ಉತ್ತಮವಾಗಿರುತ್ತದೆ. ಇದು ಅನ್ನನಾಳ, ಶ್ವಾಸಕೋಶ, ಕರುಳು ಇವುಗಳನ್ನು ಶುದ್ಧ ಮಾಡುವ ಕಾರ್ಯವನ್ನು ಮಾಡುತ್ತದೆ.

ರಕ್ತವನ್ನು ಶುದ್ದೀಕರಿಸುತ್ತದೆ

ನೀವು ಬೆಲ್ಲವನ್ನು ದಿನಾ ಸ್ವಲ್ಪ ತಿನ್ನುವುದರಿಂದ ರಕ್ತವನ್ನು ಶುದ್ದೀಕರಿಸಲು ಸಹಕಾರಿ. ಇದರಿಂದ ಅನೇಕ ಬಗೆಯ ಕಾಯಿಲೆ ತಡೆಗಟ್ಟಬಹುದು.

Advertisement

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ

ಬೆಲ್ಲದಲ್ಲಿ ಸತು, ಸೆಲೆನಿಯಮ್ ಇರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚಾಗುವುದರಿಂದ ರಕ್ತಹೀನತೆ ತಡೆಗಟ್ಟಲು ಸಹಕಾರಿ.

ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ

ಬೆಲ್ಲದಲ್ಲಿ ಪೊಟಾಸ್ಕಿಯಂ, ಸೋಡಿಯಂ ಇರುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿಡಲು ಸಹಕಾರಿ, ನೀವು ಬೇಸಿಗೆಯಲ್ಲಿ ಬೆಲ್ಲದಿಂದ ಇವುಗಳನ್ನು ಮಾಡಿ ಕುಡಿದರೆ ತುಂಬಾ ಒಳ್ಳೆಯದು ದೊಡ್ಡ ಲೋಟ ನೀರಿಗೆ ಚಿಕ್ಕ ತುಂಡು ಬೆಲ್ಲ ಹಾಕಿ ಕುದಿಸಿ, ಬೆಲ್ಲ ಕರಗಿದಾಗ ನೀರನ್ನು ಸೋಸಿ ತಣಿಯಲು ಬಿಡಿ. ನೀರು ತಣ್ಣಗಾದ ಮೇಲೆ ಅದಕ್ಕೆ ನಿಂಬೆರಸ ಸೇರಿಸಿ ಕುಡಿಯಿರಿ. ಮನೆಯಲ್ಲಿ ಈ ನೀರನ್ನು ಮಾಡಿಟ್ಟರೆ ಬಿಸಿಲಿನಲ್ಲಿ ದಣಿದು ಬಂದಾಗ ಈ ನೀರು ಕುಡಿದರೆ ಆಯಾಸ ದೂರಾಗುವುದು.

Advertisement

ಬೆಲ್ಲವನ್ನು ಮಧುಮೇಹಿಗಳು ಬಳಸಬಹುದೇ?

ಬೆಲ್ಲದಲ್ಲೂ ಕ್ರೈಸೆಮಿಕ್ ಇಂಡೆಕ್ಸ್ ಅಧಿಕವಿರುವುದರಿಂದ ಬೆಲ್ಲ ತಿಂದಾಗ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದು, ಆದರೆ ಸಕ್ಕರೆಗೆ ಹೋಲಿಕೆ ಮಾಡಿದರೆ ಬೆಲ್ಲ ಹಾನಿಕಾರವಲ್ಲ, ಬೆಲ್ಲದಿಂದ ಮಾಡಿದ ಪದಾರ್ಥಗಳನ್ನು ಸೇವಿಸಿ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಮಿಲ್ಲೆಟ್ಸ್‌ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…

3 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

23 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago