Advertisement
ಸುದ್ದಿಗಳು

ಬೇಸಿಗೆಯಲ್ಲಿ ನೀರು ಜೊತೆ ಬೆಲ್ಲ ಸವಿಯಿರಿ – ದೇಹಕ್ಕೆ ತಂಪು, ಆರೋಗ್ಯಕ್ಕೂ ಒಳ್ಳೆಯದು

Share

ಸಾಮಾನ್ಯವಾಗಿ ಬೇಸಿಗೆಯಲ್ಲಿ ದಣಿದು ಮನೆಗೆ ಬಂದವರಿಗೆ ಒಂದು ಲೋಟ ನೀರು ಜೊತೆಗೆ ಒಂದು ತುಂಡು ಬೆಲ್ಲ ನೀಡುತ್ತಾರೆ. ಒಂದು ಲೋಟ ನೀರು ಹಾಗೂ ಆ ಬೆಲ್ಲದ ತುಂಡು ತಿಂದ ತಕ್ಷಣ ತುಂಬಾನೇ ರಿಲ್ಯಾಕ್ಸ್ ಅನಿಸುವುದು, ಆಯಾಸವೆಲ್ಲಾ ದೂರಾಗುವುದು ಅಲ್ವಾ?
ನೀವು ಇದುವರೆಗೆ ನೀರು ಹಾಗೂ ಬೆಲ್ಲ ಸೇವಿಸಿಲ್ಲ ಎಂದಾದರೆ ಬಿಸಿಲಿನಲ್ಲಿ ಓಡಾಡಿ ಬಂದಾಗ ಒಂದು ಲೋಟ ನೀರು ಜೊತೆಗೆ ಚಿಕ್ಕ ತುಂಡು ಬೆಲ್ಲ ತಿಂದು ಸುಸ್ತು ಪಟ್ ಅಂತ ಮಾಯಾಗುವುದು.

Advertisement

ಮಲಬದ್ಧತೆ ತಡೆಗಟ್ಟುತ್ತದೆ

ಬೇಸಿಗೆಯಲ್ಲಿ ಕೆಲವರಿಗೆ ದೇಹದಲ್ಲಿ ನೀರಿನಂಶ ಕಡಿಮೆಯಾಗಿ ಮಲಬದ್ಧತೆ ಸಮಸ್ಯೆ ಉಂಟಾಗುವುದು, ಬೆಲ್ಲ ಮಲಬದ್ಧತೆ ಸಮಸ್ಯೆ ತಡೆಗಟ್ಟಲು ಸಹಕಾರಿಯಾಗಿದೆ

ದೇಹದಲ್ಲಿರುವ ಕಲ್ಮಶವನ್ನು ಹೊರಹಾಕುತ್ತದೆ

ಬೆಲ್ಲ ತಿನ್ನುವುದರಿಂದ ದೇಹವನ್ನು ಡಿಟಾಕ್ಸ್ ಮಾಡುತ್ತದೆ, ಇದು ಲಿವರ್ ಅನ್ನು ಕ್ವೆನ್ಸ್ ಮಾಡುವುದರಿಂದ ಲಿವರ್‌ನ ಆರೋಗ್ಯ ಉತ್ತಮವಾಗಿರುತ್ತದೆ. ಇದು ಅನ್ನನಾಳ, ಶ್ವಾಸಕೋಶ, ಕರುಳು ಇವುಗಳನ್ನು ಶುದ್ಧ ಮಾಡುವ ಕಾರ್ಯವನ್ನು ಮಾಡುತ್ತದೆ.

ರಕ್ತವನ್ನು ಶುದ್ದೀಕರಿಸುತ್ತದೆ

ನೀವು ಬೆಲ್ಲವನ್ನು ದಿನಾ ಸ್ವಲ್ಪ ತಿನ್ನುವುದರಿಂದ ರಕ್ತವನ್ನು ಶುದ್ದೀಕರಿಸಲು ಸಹಕಾರಿ. ಇದರಿಂದ ಅನೇಕ ಬಗೆಯ ಕಾಯಿಲೆ ತಡೆಗಟ್ಟಬಹುದು.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ

ಬೆಲ್ಲದಲ್ಲಿ ಸತು, ಸೆಲೆನಿಯಮ್ ಇರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚಾಗುವುದರಿಂದ ರಕ್ತಹೀನತೆ ತಡೆಗಟ್ಟಲು ಸಹಕಾರಿ.

ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ

ಬೆಲ್ಲದಲ್ಲಿ ಪೊಟಾಸ್ಕಿಯಂ, ಸೋಡಿಯಂ ಇರುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿಡಲು ಸಹಕಾರಿ, ನೀವು ಬೇಸಿಗೆಯಲ್ಲಿ ಬೆಲ್ಲದಿಂದ ಇವುಗಳನ್ನು ಮಾಡಿ ಕುಡಿದರೆ ತುಂಬಾ ಒಳ್ಳೆಯದು ದೊಡ್ಡ ಲೋಟ ನೀರಿಗೆ ಚಿಕ್ಕ ತುಂಡು ಬೆಲ್ಲ ಹಾಕಿ ಕುದಿಸಿ, ಬೆಲ್ಲ ಕರಗಿದಾಗ ನೀರನ್ನು ಸೋಸಿ ತಣಿಯಲು ಬಿಡಿ. ನೀರು ತಣ್ಣಗಾದ ಮೇಲೆ ಅದಕ್ಕೆ ನಿಂಬೆರಸ ಸೇರಿಸಿ ಕುಡಿಯಿರಿ. ಮನೆಯಲ್ಲಿ ಈ ನೀರನ್ನು ಮಾಡಿಟ್ಟರೆ ಬಿಸಿಲಿನಲ್ಲಿ ದಣಿದು ಬಂದಾಗ ಈ ನೀರು ಕುಡಿದರೆ ಆಯಾಸ ದೂರಾಗುವುದು.

ಬೆಲ್ಲವನ್ನು ಮಧುಮೇಹಿಗಳು ಬಳಸಬಹುದೇ?

ಬೆಲ್ಲದಲ್ಲೂ ಕ್ರೈಸೆಮಿಕ್ ಇಂಡೆಕ್ಸ್ ಅಧಿಕವಿರುವುದರಿಂದ ಬೆಲ್ಲ ತಿಂದಾಗ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದು, ಆದರೆ ಸಕ್ಕರೆಗೆ ಹೋಲಿಕೆ ಮಾಡಿದರೆ ಬೆಲ್ಲ ಹಾನಿಕಾರವಲ್ಲ, ಬೆಲ್ಲದಿಂದ ಮಾಡಿದ ಪದಾರ್ಥಗಳನ್ನು ಸೇವಿಸಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

20 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

2 days ago