Advertisement
ಸುದ್ದಿಗಳು

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

Share

ಪರಿಸರ ಸಂರಕ್ಷಣೆ ಇಂದಿನ ಜಗತ್ತಿನ ಅತ್ಯಂತ ದೊಡ್ಡ ಸವಾಲಾಗಿದ್ದು, ಎಳೆಯ ಮನಸುಗಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಿದಾಗ ಮಾತ್ರ ಭವಿಷ್ಯದಲ್ಲಿ ಸ್ವಚ್ಛ ಮತ್ತು ಹಸಿರು ಪರಿಸರ ನಿರ್ಮಾಣ ಸಾಧ್ಯ ಎಂದು ಜೆಪ್ಪು ಸಂತ ಜೆರೋಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಅರ್ಪಿತಾ ಅಭಿಪ್ರಾಯಪಟ್ಟರು.

ಚಿಣ್ಣರ ಚಾವಡಿ ಮಂಗಳೂರು ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೆಪ್ಪು ಸಂತ ಜೆರೋಸಾ ಪ್ರೌಢಶಾಲೆಯಲ್ಲಿ ಆಯೋಜಿಸಲಾದ “ಗಿಡ ಬೆಳೆಸೋಣ, ನಾಡು ಉಳಿಸೋಣ” ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಗಿಡ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿರುವ ಪರಿಣಾಮ ಇಡೀ ಭೂಮಂಡಲದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಕೆಲವರ ಸ್ವಾರ್ಥಲಾಲಸೆಯಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಇಂತಹ ಸಂದರ್ಭದಲ್ಲಿ ಮಕ್ಕಳಲ್ಲಿ ಪರಿಸರದ ಮಹತ್ವದ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದ ಚಿಣ್ಣರ ಚಾವಡಿ ಮಂಗಳೂರು ಸಂಚಾಲಕ ಸುನಿಲ್ ಕುಮಾರ್ ಬಜಾಲ್, ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡ ನೆಟ್ಟು ಅದರ ಪೋಷಣೆ ಮಾಡಿದರೆ ಸಾವಿರಾರು ಜೀವಿಗಳಿಗೆ ಬದುಕಿನ ಆಸರೆಯಾಗಬಹುದು. ಹಸಿರು ಪರಿಸರ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ತಮ್ಮ ಬದ್ಧತೆಯನ್ನು ತೋರಿಸಬೇಕಾಗಿದೆ ಎಂದು ಕರೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಕ್ರಮದಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪ್ರಮುಖರಾದ ಅಸುಂತ ಡಿಸೋಜ, ಮರ್ಲಿನ್ ರೇಗೋ, ಫ್ಲೇವಿಕ್ರಾಸ್ತಾ ಅತ್ತಾವರ, ಯುವಜನ ನಾಯಕರಾದ ಜಗದೀಶ್ ಬಜಾಲ್, ಚಿಣ್ಣರ ಚಾವಡಿ ಅಧ್ಯಕ್ಷರಾದ ಆಡ್ಲಿನ್ ಸಿಕ್ವೇರಾ, ಕಾರ್ಯದರ್ಶಿ ಸಂಗಮೇಶ್ ಹಾಗೂ ಇತರ ಪದಾಧಿಕಾರಿಗಳಾದ ವಿಶಾಗಾ, ಇಯೋನ್ನಾ ಮತ್ತು ಮೌಲ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು.

Sister Arpita, Headmistress of St. Gerosa High School, Jeppu, emphasized that creating environmental awareness among children is essential for building a sustainable future. She was speaking at a sapling distribution program organized by Chinnara Chavadi Mangalore as part of World Environment Day celebrations.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

7 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

14 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

16 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

17 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago