ಪರಿಸರ ಸಂರಕ್ಷಣೆ ಇಂದಿನ ಜಗತ್ತಿನ ಅತ್ಯಂತ ದೊಡ್ಡ ಸವಾಲಾಗಿದ್ದು, ಎಳೆಯ ಮನಸುಗಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಿದಾಗ ಮಾತ್ರ ಭವಿಷ್ಯದಲ್ಲಿ ಸ್ವಚ್ಛ ಮತ್ತು ಹಸಿರು ಪರಿಸರ ನಿರ್ಮಾಣ ಸಾಧ್ಯ ಎಂದು ಜೆಪ್ಪು ಸಂತ ಜೆರೋಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಅರ್ಪಿತಾ ಅಭಿಪ್ರಾಯಪಟ್ಟರು.
ಚಿಣ್ಣರ ಚಾವಡಿ ಮಂಗಳೂರು ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೆಪ್ಪು ಸಂತ ಜೆರೋಸಾ ಪ್ರೌಢಶಾಲೆಯಲ್ಲಿ ಆಯೋಜಿಸಲಾದ “ಗಿಡ ಬೆಳೆಸೋಣ, ನಾಡು ಉಳಿಸೋಣ” ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಗಿಡ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿರುವ ಪರಿಣಾಮ ಇಡೀ ಭೂಮಂಡಲದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಕೆಲವರ ಸ್ವಾರ್ಥಲಾಲಸೆಯಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಇಂತಹ ಸಂದರ್ಭದಲ್ಲಿ ಮಕ್ಕಳಲ್ಲಿ ಪರಿಸರದ ಮಹತ್ವದ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದ ಚಿಣ್ಣರ ಚಾವಡಿ ಮಂಗಳೂರು ಸಂಚಾಲಕ ಸುನಿಲ್ ಕುಮಾರ್ ಬಜಾಲ್, ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡ ನೆಟ್ಟು ಅದರ ಪೋಷಣೆ ಮಾಡಿದರೆ ಸಾವಿರಾರು ಜೀವಿಗಳಿಗೆ ಬದುಕಿನ ಆಸರೆಯಾಗಬಹುದು. ಹಸಿರು ಪರಿಸರ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ತಮ್ಮ ಬದ್ಧತೆಯನ್ನು ತೋರಿಸಬೇಕಾಗಿದೆ ಎಂದು ಕರೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕಾರ್ಯಕ್ರಮದಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪ್ರಮುಖರಾದ ಅಸುಂತ ಡಿಸೋಜ, ಮರ್ಲಿನ್ ರೇಗೋ, ಫ್ಲೇವಿಕ್ರಾಸ್ತಾ ಅತ್ತಾವರ, ಯುವಜನ ನಾಯಕರಾದ ಜಗದೀಶ್ ಬಜಾಲ್, ಚಿಣ್ಣರ ಚಾವಡಿ ಅಧ್ಯಕ್ಷರಾದ ಆಡ್ಲಿನ್ ಸಿಕ್ವೇರಾ, ಕಾರ್ಯದರ್ಶಿ ಸಂಗಮೇಶ್ ಹಾಗೂ ಇತರ ಪದಾಧಿಕಾರಿಗಳಾದ ವಿಶಾಗಾ, ಇಯೋನ್ನಾ ಮತ್ತು ಮೌಲ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು.
Sister Arpita, Headmistress of St. Gerosa High School, Jeppu, emphasized that creating environmental awareness among children is essential for building a sustainable future. She was speaking at a sapling distribution program organized by Chinnara Chavadi Mangalore as part of World Environment Day celebrations.
“ಗಿಡ ಬೆಳೆಸೋಣ, ನಾಡು ಉಳಿಸೋಣ”
ಮಂಗಳೂರಿನ ಜೆಪ್ಪು ಸಂತ ಜೆರೋಸಾ ಪ್ರೌಢಶಾಲೆಯಲ್ಲಿ ನಡೆದ ಗಿಡ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಮಹತ್ವ ತಿಳಿಸಲಾಯಿತು. https://t.co/5GcWVrXHW7#WorldEnvironmentDay #GreenFuture #TreePlantation #EnvironmentAwareness #SaveNature #theruralmirror pic.twitter.com/eLMzinDPY4
— theruralmirror (@ruralmirror) June 21, 2026
ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯ ಮುನ್ಸೂಚನೆ…
ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…