Advertisement
MIRROR FOCUS

ಹಬ್ಬಗಳ ಸಮಯದಲ್ಲಿ ಪರಿಸರಕ್ಕೆ ಹಾನಿ ಮಾಡುವುದು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನಿಂದ ರಕ್ಷಿಸಲ್ಪಡದ ಧಾರ್ಮಿಕ ಆಚರಣೆಯಾಗಿದೆ: ನ್ಯಾಯಮೂರ್ತಿ ಓಕಾ

Share

ನಮ್ಮ ದೇಶದಲ್ಲಿ ಹಬ್ಬ, ಧಾರ್ಮಿಕ ಸಮಾರಂಭಗಳ ಸಮಯದಲ್ಲಿ ಪರಿಸರದ ಮೇಲೆ ಯಾವ ರೀತಿ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ಯಾರೂ ಗಮನವಿಟ್ಟುಕೊಳ್ಳುವುದಿಲ್ಲ. ನದಿಗಳನ್ನು ಕಲುಷಿತಗೊಳಿಸುವುದು, ಪ್ರಾಣಿಬಲಿ, ವಾಯುಮಾಲಿನ್ಯ, ಶಬ್ದ ಮಾಲಿನ್ಯ ಇತ್ಯಾದಿಗಳನ್ನು ನಾವೇ ನಮ್ಮ ಹಬ್ಬಗಳಲ್ಲಿ ಮಾಡುತ್ತೇವೆ. ಇದರಿಂದ ಪರಿಸರದ ಮೇಲೆ ಅದೇಷ್ಟೋ ಪ್ರಭಾವ ಬೀರುತ್ತವೆ ಎಂಬುದನ್ನು ನಾವು ತಿಳಿಯಬೇಕು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಓಕಾಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಪರಿಸರಕ್ಕೆ ಹಾನಿ ಮಾಡುವುದನ್ನು ಸಾಂವಿಧಾನಿಕ ಹಕ್ಕುಗಳಿಂದ ಹೇಗೆ ರಕ್ಷಿಸಲಾಗುವುದಿಲ್ಲ ಎಂಬುದರ ಬಗ್ಗೆ ತೀಕ್ಷ್ಣವಾದ ಎಚ್ಚರಿಕೆ ನೀಡಿದರು.  ಸಂವಿಧಾನವು ಪ್ರತಿಯೊಬ್ಬ ನಾಗರಿಕನು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕೆಂದು ಹೇಳುತ್ತದೆಯಾದರೂ, ರಾಜಕಾರಣಿಗಳು ಹೆಚ್ಚಾಗಿ ಧಾರ್ಮಿಕ ಭಾವನೆಗಳನ್ನಷ್ಟೇ ಗಮನಿಸುತ್ತಾರೆ ಮತ್ತು ಮೂಢನಂಬಿಕೆಗಳನ್ನು ಪ್ರಶ್ನಿಸುವವರನ್ನು ಬೆಂಬಲಿಸುವ ಬದಲು ಅವರ ಮೇಲೆ ದಾಳಿ ಮಾಡಲಾಗುತ್ತದೆ. ಈ ಕಾರಣದಿಂದಾಗಿ ಭಾರತವು ಸವಾಲುಗಳನ್ನು ಎದುರಿಸುತ್ತಲೇ ಇದೆ ಎಂದು ಅವರು ಹೇಳಿದರು.

2027 ರಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ನೂರು ವರ್ಷ ಹಳೆಯ ಮರಗಳನ್ನು ಕಡಿಯುವ ಪ್ರಸ್ತಾಪವಿದೆ. ಇದರಿಂದ ಪರಸರಕ್ಕೆ ಯಾವ ರೀತಿ ಹಾನಿಯಾಗಬಹುದು ಎಂಬುದನ್ನು ತಿಳಿದುಕೊಳ್ಳಬೇಕಲ್ಲವೇ?. ಇದರಿಂದ  ನಾಗರಿಕರು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆಂದು ಅರ್ಥವಾಗುತ್ತದೆ.  ಅಲ್ಲದೇ ಇದ್ದರೆ, ಹಬ್ಬಗಳ ಸಮಯದಲ್ಲಿ ಪ್ರಾಣಿಗಳನ್ನು ಕೊಲ್ಲುವುದು ಮತ್ತು ಬಲಿ ನೀಡುವುದು ಅಥವಾ ಧ್ವನಿವರ್ಧಕಗಳ ವಿವೇಚನಾರಹಿತ ಬಳಕೆಯನ್ನು ನಾವು ಅನುಮತಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಹಲವು ಹಬ್ಬಗಳು ಮತ್ತು ಆಚರಣೆಗಳು ನದಿಗಳು, ಸರೋವರಗಳು ಮತ್ತು ಸಮುದ್ರಗಳನ್ನು ಕಲುಷಿತಗೊಳಿಸುತ್ತವೆ, ಅಂತಹ ಮಾಲಿನ್ಯವು ಧಾರ್ಮಿಕ ಸ್ವಾತಂತ್ರ್ಯವೆಂದು ಸಮರ್ಥಿಸಲಾಗುವುದಿಲ್ಲ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

2 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

10 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

18 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago