ಪರಿಸರವಾದಿ ಶಿವಾನಂದ ಕಳವೆಯವರ ಕಾಳಜಿ | ಅವರ ಫೇಸ್‌ಬುಕ್‌ನ ಒಂದು ಪೋಸ್ಟ್‌ನಿಂದಾಗಿ ತಪ್ಪಿತು 3500 ಮರಗಳ ಮಾರಣ ಹೋಮ..!

June 28, 2024
3:03 PM

ಶಿವಾನಂದ ಕಳವೆ(Shivananda Kalave), ಪತ್ರಕರ್ತ(Journalist), ಬರಹಗಾರ(Writer), ಕೃಷಿಕ(Agriculturist) ಅನ್ನುವುದಕ್ಕಿಂತಲೂ ಪರಿಸರವಾದಿ(Environmentalist) ಹೆಚ್ಚು ಸೂಕ್ತ. ಅನೇಕ ವರ್ಷಗಳಿಂದ ಪರಿಸರದ ಉಳಿವಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಸದಾ ಪ್ರಕೃತಿಯ ಮಡಿಲಲ್ಲೇ ತಮ್ಮ ಕಾಲವನ್ನು ಕಳೆಯುವವರು ಕಳವೆಯವರು. ಉತ್ತರ ಕನ್ನಡ ಜಿಲ್ಲೆಯ(Uttara kannada) ಯಲ್ಲಾಪುರ, ಶಿರಸಿ ಸೇರಿದಂತೆ ಅಲ್ಲಿನ ಅನೇಕ ತಾಲೂಕುಗಳಲ್ಲಿ ಪರಿಸರ ಉಳಿಸುವ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ(Social media) ಮೂಲಕ ಪರಸರದ ಬಗ್ಗೆಗಿನ ಅನೇಕ ಲೇಖನಗಳನ್ನು ಬರೆದು, ವಿಡೀಯೋಗಳನ್ನು ಮಾಡಿ ಪರಿಸರ ಉಳಿಸಲು ತಮ್ಮಿಂದ ಕೈಲಾಗುವ ಪ್ರಯತ್ನ ಮಾಡುತ್ತಾರೆ. ಈಗ ಒಂದೇ ಒಂದು ಅವರ ಫೇಸ್‌ಬುಕ್ ಪೋಸ್ಟ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಿ ಹೋಗಬಹುದಾಗಿದ್ದ 3500 ಮರಗಳ ಮಾರಣ ಹೋಮ‌ ತಪ್ಪಿಸಿದೆ. ನಿಜವಾಗಿಯೂ ಒಂದು ಕುತೂಹಲ. 

Advertisement
Advertisement

ಶಿವಾನಂದ ಕಳವೆಯವರಿಗೆ ಅವರ ಪರಿಚಯದವರೊಬ್ಬರು ಕೈಗಾ-ಬಾರೆ ರಸ್ತೆಯಲ್ಲಿ ಹಾಕಿದ್ದ ಒಂದು ಬೋರ್ಡ್‌ನ ಫೋಟೋ ಕಳಿಸಿದ್ದರು. ಬೋರ್ಡ್‌ ಪ್ರಕಾರ ಆ ವ್ಯಾಪ್ತಿಯಲ್ಲಿ 10.500 ಕಿಲೋಮೀಟರ್‌ನಷ್ಟು ರಸ್ತೆ ಅಗಲೀಕರಣಕ್ಕಾಗಿ ಮರ ಕಡಿಯುವ ಯೋಜನೆಯನ್ನು ಅರಣ್ಯ ಇಲಾಖೆ ಹಮ್ಮಿಕೊಂಡಿತ್ತು. ಕಳಚೆ, ಬಾರೆ, ಮಲವಳ್ಳಿ ಸೇರಿದಂತೆ ಹಲವು ಹಳ್ಳಿಗಳು ಭೂಕುಸಿತಕ್ಕೆ ಒಳಪಡುವ ಪ್ರದೇಶಗಳು, ತುಂಬಾ ಸೂಕ್ಷ್ಮ ಪ್ರದೇಶವಾದ ಇಲ್ಲಿ ಮರ ಕಡಿಯುವುದು ಅವೈಜ್ಞಾನಿಕ. ಅಲ್ಲದೇ ಮಳೆಗಾಲದಲ್ಲಿ ಮರ ಕಡೆಯಲು ಸ್ವತಃ ಸರ್ಕಾರದ ನಿಯಮಗಳೇ ಅವಕಾಶ ಕೊಡುತ್ತಿರಲಿಲ್ಲ.

 

  • ಅಂತರ್ಜಾಲ ಮಾಹಿತಿ

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ
ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ
June 24, 2025
10:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror