Advertisement
MIRROR FOCUS

ಪರಿಸರವಾದಿ ಶಿವಾನಂದ ಕಳವೆಯವರ ಕಾಳಜಿ | ಅವರ ಫೇಸ್‌ಬುಕ್‌ನ ಒಂದು ಪೋಸ್ಟ್‌ನಿಂದಾಗಿ ತಪ್ಪಿತು 3500 ಮರಗಳ ಮಾರಣ ಹೋಮ..!

Share

ಶಿವಾನಂದ ಕಳವೆ(Shivananda Kalave), ಪತ್ರಕರ್ತ(Journalist), ಬರಹಗಾರ(Writer), ಕೃಷಿಕ(Agriculturist) ಅನ್ನುವುದಕ್ಕಿಂತಲೂ ಪರಿಸರವಾದಿ(Environmentalist) ಹೆಚ್ಚು ಸೂಕ್ತ. ಅನೇಕ ವರ್ಷಗಳಿಂದ ಪರಿಸರದ ಉಳಿವಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಸದಾ ಪ್ರಕೃತಿಯ ಮಡಿಲಲ್ಲೇ ತಮ್ಮ ಕಾಲವನ್ನು ಕಳೆಯುವವರು ಕಳವೆಯವರು. ಉತ್ತರ ಕನ್ನಡ ಜಿಲ್ಲೆಯ(Uttara kannada) ಯಲ್ಲಾಪುರ, ಶಿರಸಿ ಸೇರಿದಂತೆ ಅಲ್ಲಿನ ಅನೇಕ ತಾಲೂಕುಗಳಲ್ಲಿ ಪರಿಸರ ಉಳಿಸುವ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ(Social media) ಮೂಲಕ ಪರಸರದ ಬಗ್ಗೆಗಿನ ಅನೇಕ ಲೇಖನಗಳನ್ನು ಬರೆದು, ವಿಡೀಯೋಗಳನ್ನು ಮಾಡಿ ಪರಿಸರ ಉಳಿಸಲು ತಮ್ಮಿಂದ ಕೈಲಾಗುವ ಪ್ರಯತ್ನ ಮಾಡುತ್ತಾರೆ. ಈಗ ಒಂದೇ ಒಂದು ಅವರ ಫೇಸ್‌ಬುಕ್ ಪೋಸ್ಟ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಿ ಹೋಗಬಹುದಾಗಿದ್ದ 3500 ಮರಗಳ ಮಾರಣ ಹೋಮ‌ ತಪ್ಪಿಸಿದೆ. ನಿಜವಾಗಿಯೂ ಒಂದು ಕುತೂಹಲ. 

ಶಿವಾನಂದ ಕಳವೆಯವರಿಗೆ ಅವರ ಪರಿಚಯದವರೊಬ್ಬರು ಕೈಗಾ-ಬಾರೆ ರಸ್ತೆಯಲ್ಲಿ ಹಾಕಿದ್ದ ಒಂದು ಬೋರ್ಡ್‌ನ ಫೋಟೋ ಕಳಿಸಿದ್ದರು. ಬೋರ್ಡ್‌ ಪ್ರಕಾರ ಆ ವ್ಯಾಪ್ತಿಯಲ್ಲಿ 10.500 ಕಿಲೋಮೀಟರ್‌ನಷ್ಟು ರಸ್ತೆ ಅಗಲೀಕರಣಕ್ಕಾಗಿ ಮರ ಕಡಿಯುವ ಯೋಜನೆಯನ್ನು ಅರಣ್ಯ ಇಲಾಖೆ ಹಮ್ಮಿಕೊಂಡಿತ್ತು. ಕಳಚೆ, ಬಾರೆ, ಮಲವಳ್ಳಿ ಸೇರಿದಂತೆ ಹಲವು ಹಳ್ಳಿಗಳು ಭೂಕುಸಿತಕ್ಕೆ ಒಳಪಡುವ ಪ್ರದೇಶಗಳು, ತುಂಬಾ ಸೂಕ್ಷ್ಮ ಪ್ರದೇಶವಾದ ಇಲ್ಲಿ ಮರ ಕಡಿಯುವುದು ಅವೈಜ್ಞಾನಿಕ. ಅಲ್ಲದೇ ಮಳೆಗಾಲದಲ್ಲಿ ಮರ ಕಡೆಯಲು ಸ್ವತಃ ಸರ್ಕಾರದ ನಿಯಮಗಳೇ ಅವಕಾಶ ಕೊಡುತ್ತಿರಲಿಲ್ಲ.

 

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

5 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

11 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

20 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

21 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago