Advertisement
ಸುದ್ದಿಗಳು

ಪರಿಸರ ಮಾಲಿನ್ಯ ತಗ್ಗಬೇಕು, ಜನರಿಗೆ ಉತ್ತಮ ಸೇವೆ ಸಿಗಬೇಕು

Share

ಪರಿಸರ ಮಾಲಿನ್ಯ ತಗ್ಗಬೇಕು, ಜನರಿಗೆ ಉತ್ತಮ ಸೇವೆ ಸಿಗಬೇಕು ಎಂದು ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಚಾಲನೆ ನೀಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. 

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರಲ್ಲಿ ರಿಫೆಕ್ಸ್ ಗ್ರೂಪ್ ವತಿಯಿಂದ ಕಾರ್ಯಾಚರಣೆ ನಡೆಸಲಿರುವ 170 ಎಲೆಕ್ಟ್ರಿಕ್ ಕಾರುಗಳಿಗೆ ಡಿಸಿಎಂ ಅವರು ಚಾಲನೆ ನೀಡಿದರು.  ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ರಿಫೆಕ್ಸ್ ಸಂಸ್ಥೆಯವರು ಬೆಂಗಳೂರಿನಲ್ಲಿ ಗ್ರೀನ್ ಟ್ಯಾಕ್ಸಿ ಸೇವೆ ಮೂಲಕ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದಾರೆ. ಸುಮಾರು 170 ಕಾರುಗಳನ್ನು ಸೇವೆಗೆ ನೀಡಿದ್ದಾರೆ. ಸಂಸ್ಥೆಯವರು ಈಗಾಗಲೇ 450ಕ್ಕೂ ಹೆಚ್ಚು ಕಾರುಗಳನ್ನು ಹೊಂದಿದ್ದು, ಇದರ ಸಂಖ್ಯೆ 600ರ ಗಡಿ ದಾಟಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ₹699 ಹಾಗೂ ವಿಮಾನ ನಿಲ್ದಾಣದಿಂದ ನಗರಕ್ಕೆ ಸಾಮಾನ್ಯ ಶುಲ್ಕ ವಿಧಿಸುವುದಾಗಿ ಹೇಳಿದ್ದಾರೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಸ್ಪರ್ಧೆ ಇದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗಬೇಕು.  ಇದರ ಜತೆಗೆ ಪಿಂಕ್ ಟ್ಯಾಕ್ಸಿ ಪರಿಕಲ್ಪನೆಯಲ್ಲಿ ಮಹಿಳೆಯರ ಪ್ರಯಾಣಕ್ಕೆ ಹಾಗೂ ಸುರಕ್ಷತೆಗೆ ಟ್ಯಾಕ್ಸಿ ಮೀಸಲಿಡಲಾಗಿದೆ. ಈ ವಿಚಾರವನ್ನು ನನಗೆ ತಿಳಿಸಿ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿದರು. ಹೀಗಾಗಿ ನಾನು ಈ ಪ್ರಯತ್ನಕ್ಕೆ ಚಾಲನೆ ನೀಡಿದೆ. ಸಂಸ್ಥೆಗೆ ಒಳ್ಳೆಯದಾಗಲಿ ಜನರಿಗೆ ಉತ್ತಮ ಸೇವೆ ಸಿಗಲಿ ಎಂದು ಸರ್ಕಾರದ ಪರವಾಗಿ ತುಂಬು ಹೃದಯದ ಶುಭಾಶಯ ಅರ್ಪಿಸುತ್ತೇನೆ” ಎಂದು ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

6 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

6 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

8 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

15 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

15 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

16 hours ago