Advertisement
ಸುದ್ದಿಗಳು

ಪರಿಸರ ಮಾಲಿನ್ಯ ತಗ್ಗಬೇಕು, ಜನರಿಗೆ ಉತ್ತಮ ಸೇವೆ ಸಿಗಬೇಕು

Share

ಪರಿಸರ ಮಾಲಿನ್ಯ ತಗ್ಗಬೇಕು, ಜನರಿಗೆ ಉತ್ತಮ ಸೇವೆ ಸಿಗಬೇಕು ಎಂದು ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಚಾಲನೆ ನೀಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. 

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರಲ್ಲಿ ರಿಫೆಕ್ಸ್ ಗ್ರೂಪ್ ವತಿಯಿಂದ ಕಾರ್ಯಾಚರಣೆ ನಡೆಸಲಿರುವ 170 ಎಲೆಕ್ಟ್ರಿಕ್ ಕಾರುಗಳಿಗೆ ಡಿಸಿಎಂ ಅವರು ಚಾಲನೆ ನೀಡಿದರು.  ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ರಿಫೆಕ್ಸ್ ಸಂಸ್ಥೆಯವರು ಬೆಂಗಳೂರಿನಲ್ಲಿ ಗ್ರೀನ್ ಟ್ಯಾಕ್ಸಿ ಸೇವೆ ಮೂಲಕ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದಾರೆ. ಸುಮಾರು 170 ಕಾರುಗಳನ್ನು ಸೇವೆಗೆ ನೀಡಿದ್ದಾರೆ. ಸಂಸ್ಥೆಯವರು ಈಗಾಗಲೇ 450ಕ್ಕೂ ಹೆಚ್ಚು ಕಾರುಗಳನ್ನು ಹೊಂದಿದ್ದು, ಇದರ ಸಂಖ್ಯೆ 600ರ ಗಡಿ ದಾಟಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ₹699 ಹಾಗೂ ವಿಮಾನ ನಿಲ್ದಾಣದಿಂದ ನಗರಕ್ಕೆ ಸಾಮಾನ್ಯ ಶುಲ್ಕ ವಿಧಿಸುವುದಾಗಿ ಹೇಳಿದ್ದಾರೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಸ್ಪರ್ಧೆ ಇದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗಬೇಕು.  ಇದರ ಜತೆಗೆ ಪಿಂಕ್ ಟ್ಯಾಕ್ಸಿ ಪರಿಕಲ್ಪನೆಯಲ್ಲಿ ಮಹಿಳೆಯರ ಪ್ರಯಾಣಕ್ಕೆ ಹಾಗೂ ಸುರಕ್ಷತೆಗೆ ಟ್ಯಾಕ್ಸಿ ಮೀಸಲಿಡಲಾಗಿದೆ. ಈ ವಿಚಾರವನ್ನು ನನಗೆ ತಿಳಿಸಿ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿದರು. ಹೀಗಾಗಿ ನಾನು ಈ ಪ್ರಯತ್ನಕ್ಕೆ ಚಾಲನೆ ನೀಡಿದೆ. ಸಂಸ್ಥೆಗೆ ಒಳ್ಳೆಯದಾಗಲಿ ಜನರಿಗೆ ಉತ್ತಮ ಸೇವೆ ಸಿಗಲಿ ಎಂದು ಸರ್ಕಾರದ ಪರವಾಗಿ ತುಂಬು ಹೃದಯದ ಶುಭಾಶಯ ಅರ್ಪಿಸುತ್ತೇನೆ” ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

18 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

18 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago