Advertisement
MIRROR FOCUS

ರಾಜ್ಯಾದ್ಯಂತ ಡೆಂಗ್ಯೂ ಭೀತಿ | ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆ | ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

Share

ಡೆಂಗ್ಯೂ(Dengue) ಮಹಾಮಾರಿ ಇಡೀ ರಾಜ್ಯದಲಲ್ಲಿ  ಕಾಣುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಬಾಧಿತರ ಸಂಖ್ಯೆ ಏರುತ್ತಲೇ ಇದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಇದರಿಂದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 358ಕ್ಕೆ ಏರಿದೆ. ಬಿಬಿಎಂಪಿ(BBMP) ವ್ಯಾಪ್ತಿಯಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹಾಗೆ ಎಲ್ಲಾ ಜಿಲ್ಲೆ, ತಾಲೂಕು, ಊರು, ಹಳ್ಳಿ- ಹಳ್ಳಿಗಳಲ್ಲೂ ತನ್ನ ಪ್ರತಾಪವನ್ನು ತೋರುತ್ತಿದೆ.

Advertisement
Advertisement

ಕಳೆದ 24 ಗಂಟೆಯಲ್ಲಿ 1874 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 293 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇದರಲ್ಲಿ 1 ವರ್ಷದೊಳಗಿನ 2, 1 ರಿಂದ 18 ವರ್ಷದೊಳಗಿನ 101, 18 ವರ್ಷ ಮೇಲ್ಪಟ್ಟವರು 190 ಮಂದಿ ಇದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಸಾವಿನ ಪ್ರಮಾಣ ಶೇ.0.08 ಇದೆ. ಪ್ರಸ್ತುತ 100 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 7,840 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಒಟ್ಟು 7 ಮಂದಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ. ಡೆಂಗ್ಯೂ ಪ್ರಕರಣಗಳ ಹೆಚ್ಚಳ ಸಂಬಂಧ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಸ್ಲಂ‌ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸೂಚನೆ ನೀಡಿದ್ದಾರೆ. ಅಲ್ಲದೇ ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ನಿತ್ಯ ಪರಿಶೀಲನೆ ನಡೆಸುವಂತೆಯೂ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಒಟ್ಟು ಇಲ್ಲಿವರೆಗೆ (ಬುಧವಾರ) 7,362 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 303 ಸಕ್ರಿಯ ಡೆಂಗ್ಯೂ ಪ್ರಕರಣಗಳಿವೆ. ಈವರೆಗೆ ರಾಜ್ಯದಲ್ಲಿ 7 ಡೆಂಗ್ಯೂನಿಂದ ಸಾವುಗಳಾಗಿವೆ. ಸ್ಲಂ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸೂಚನೆ ನೀಡಲಾಗಿದೆ. ಎಲ್ಲಿ ಸೊಳ್ಳೆಗಳು ಹೆಚ್ಚಿರುತ್ತವೆ ಅಲ್ಲಿ ಉಚಿತ ಸೊಳ್ಳೆ ಪರದೆ ನೀಡಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

14 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

23 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

24 hours ago