MIRROR FOCUS

ರಾಜ್ಯಾದ್ಯಂತ ಡೆಂಗ್ಯೂ ಭೀತಿ | ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆ | ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಡೆಂಗ್ಯೂ(Dengue) ಮಹಾಮಾರಿ ಇಡೀ ರಾಜ್ಯದಲಲ್ಲಿ  ಕಾಣುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಬಾಧಿತರ ಸಂಖ್ಯೆ ಏರುತ್ತಲೇ ಇದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಇದರಿಂದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 358ಕ್ಕೆ ಏರಿದೆ. ಬಿಬಿಎಂಪಿ(BBMP) ವ್ಯಾಪ್ತಿಯಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹಾಗೆ ಎಲ್ಲಾ ಜಿಲ್ಲೆ, ತಾಲೂಕು, ಊರು, ಹಳ್ಳಿ- ಹಳ್ಳಿಗಳಲ್ಲೂ ತನ್ನ ಪ್ರತಾಪವನ್ನು ತೋರುತ್ತಿದೆ.

Advertisement
Advertisement

ಕಳೆದ 24 ಗಂಟೆಯಲ್ಲಿ 1874 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 293 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇದರಲ್ಲಿ 1 ವರ್ಷದೊಳಗಿನ 2, 1 ರಿಂದ 18 ವರ್ಷದೊಳಗಿನ 101, 18 ವರ್ಷ ಮೇಲ್ಪಟ್ಟವರು 190 ಮಂದಿ ಇದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಸಾವಿನ ಪ್ರಮಾಣ ಶೇ.0.08 ಇದೆ. ಪ್ರಸ್ತುತ 100 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 7,840 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಒಟ್ಟು 7 ಮಂದಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ. ಡೆಂಗ್ಯೂ ಪ್ರಕರಣಗಳ ಹೆಚ್ಚಳ ಸಂಬಂಧ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಸ್ಲಂ‌ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸೂಚನೆ ನೀಡಿದ್ದಾರೆ. ಅಲ್ಲದೇ ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ನಿತ್ಯ ಪರಿಶೀಲನೆ ನಡೆಸುವಂತೆಯೂ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಒಟ್ಟು ಇಲ್ಲಿವರೆಗೆ (ಬುಧವಾರ) 7,362 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 303 ಸಕ್ರಿಯ ಡೆಂಗ್ಯೂ ಪ್ರಕರಣಗಳಿವೆ. ಈವರೆಗೆ ರಾಜ್ಯದಲ್ಲಿ 7 ಡೆಂಗ್ಯೂನಿಂದ ಸಾವುಗಳಾಗಿವೆ. ಸ್ಲಂ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸೂಚನೆ ನೀಡಲಾಗಿದೆ. ಎಲ್ಲಿ ಸೊಳ್ಳೆಗಳು ಹೆಚ್ಚಿರುತ್ತವೆ ಅಲ್ಲಿ ಉಚಿತ ಸೊಳ್ಳೆ ಪರದೆ ನೀಡಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

1 hour ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

2 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

2 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

2 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

2 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

2 hours ago