Advertisement
MIRROR FOCUS

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

Share

ಎಥೆನಾಲ್‌ ಉತ್ಪಾದನೆ ಕೃಷಿ ಕ್ಷೇತ್ರಕ್ಕೆ ದೊಡ್ಡ ಅವಕಾಶವಾಗಿದ್ದು, ಇದು ರೈತ ಕೇಂದ್ರಿತ ನೀತಿಯಾಗಿರುವುದರಿಂದ ಬೆಳೆಗೆ ನ್ಯಾಯಯುತ ಬೆಲೆ ನೇರವಾಗಿ ರೈತರ ಕೈ ಸೇರಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ಅಖಿಲ ಭಾರತ ಕಿಸಾನ್ ಸಮನ್ವಯ ಸಮಿತಿಯ ನಿಯೋಗದೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತ ನಾಯಕರ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಹೇಳಿದರು.

ಎಥೆನಾಲ್‌ ನೀತಿಗೆ ಸರ್ಕಾರದ ಬದ್ಧತೆ :  ಎಥೆನಾಲ್‌ ನೀತಿಯು ಕೇವಲ ಪರ್ಯಾಯ ಇಂಧನ ಉತ್ಪಾದನೆಗೆ ಸೀಮಿತವಾಗಿಲ್ಲ. ಇದು ರೈತರ ಆದಾಯ ಹೆಚ್ಚಿಸುವ ಜೊತೆಗೆ ದೇಶದ ಇಂಧನ ಭದ್ರತೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವರು ಹೇಳಿದರು.

ಬೆಳೆಗಳಿಗೆ ಉತ್ತಮ ಮಾರುಕಟ್ಟೆ ದೊರೆಯುವುದರಿಂದ ರೈತರಿಗೆ ಆರ್ಥಿಕ ಲಾಭವಾಗಲಿದ್ದು, ದೇಶದ ಇಂಧನ ಆಮದು ಮೇಲಿನ ಅವಲಂಬನೆಯೂ ಕಡಿಮೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ರೈತ ಸಂಘಟನೆಗಳು ನೀತಿ ಪಾಲುದಾರರು :  ರೈತ ಸಂಘಟನೆಗಳನ್ನು ಸರ್ಕಾರದ ವಿರೋಧಿಗಳಾಗಿ ನೋಡುವ ಬದಲು, ಕೃಷಿ ನೀತಿಗಳ ರೂಪಿಕರಣದಲ್ಲಿ ಪ್ರಮುಖ ಪಾಲುದಾರರಾಗಿ ಸರ್ಕಾರ ಪರಿಗಣಿಸುತ್ತದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ರೈತರ ಅಭಿಪ್ರಾಯಗಳನ್ನು ಆಲಿಸಿ, ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವ ನೀತಿಗಳನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ರೈತ ಮುಖಂಡರು ಎಥೆನಾಲ್‌ ಉತ್ಪಾದನೆಗೆ ಬಲವಾದ ಬೆಂಬಲ ವ್ಯಕ್ತಪಡಿಸಿದರು. ಮೆಕ್ಕೆಜೋಳ, ಕಬ್ಬು ಸೇರಿದಂತೆ ಎಥೆನಾಲ್‌ ಉತ್ಪಾದನೆಗೆ ಬಳಸುವ ಯಾವುದೇ ಬೆಳೆಗೆ ರೈತರಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Union Agriculture Minister Shivraj Singh Chouhan said ethanol presents a major opportunity for Indian agriculture by ensuring better prices for farmers while strengthening the country’s energy security. During a meeting with farmer leaders, he assured that the government would seriously consider their suggestions and emphasized that farmer organizations are policy partners, not opponents.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago