Advertisement
MIRROR FOCUS

ಎತ್ತಿನಹೊಳೆ ಯೋಜನೆಗೆ ಅತ್ಯಂತ ಎತ್ತರದ ಮೇಲ್ಗಾಲುವೆ | ತುಮಕೂರು ಜಿಲ್ಲೆ ಚೇಳೂರು ಬಳಿ ನಿರ್ಮಾಣ

Share

ಕೋಲಾರ– ಚಿಕ್ಕಬಳ್ಳಾಪುರ ಸೇರಿದಂತೆ ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಎತ್ತಿನಹೊಳೆ ಯೋಜನೆಗೆ ತುಮಕೂರು ಜಿಲ್ಲೆ ಬೆಳ್ಳಾವಿಯ ಬಳಿಯ ಚೇಳೂರು ಎಂಬಲ್ಲಿ ನಿರ್ಮಾಣವಾಗಿರುವ ಅಕ್ವಾಡಾಕ್ಟ್ ಮೇಲ್‌ ಕಾಲುವೆ ಈಗ ಗಮನ ಸೆಳೆಯುತ್ತಿದೆ. ದೇಶದ ಅತಿ ಎತ್ತರದ ಹಾಗೂ ಏಷ್ಯಾದಲ್ಲಿಯೇ ಅತಿ ಉದ್ದದ ಮೇಲ್ಗಾಲುವೆ ಇದಾಗಿದೆ. 10.4 ಕಿಲೋಮೀಟರ್ ಉದ್ದದ ಈ ಮೇಲ್ಗಾಲುವೆ ಕಾಮಗಾರಿ 2018ರಲ್ಲಿ ಆರಂಭವಾಗಿತ್ತು.

ಕೋವಿಡ್-19 ಮತ್ತು ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಎದುರಾದ ಸವಾಲುಗಳಿಂದ ವಿಳಂಬವಾಗಿ 2023ರಲ್ಲಿ ಪೂರ್ಣಗೊಂಡಿದ್ದು, ಇದೀಗ ರಾಷ್ಟ್ರ ಮನ್ನಣೆ ಪಡೆದುಕೊಂಡಿದೆ. ಸುಮಾರು 1 ಸಾವಿರದ 203 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಅಕ್ವಾಡಾಕ್ಟ್ 120 ಅಡಿ ಎತ್ತರದಲ್ಲಿದ್ದು, 3,300 ಕ್ಯೂಸೆಕ್ ನೀರನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಕೇವಲ ನೀರಿನ ಸಾಗಾಟದ ದೃಷ್ಟಿಯಿಂದ ಮಾತ್ರವಲ್ಲದೇ ಆಧುನಿಕ ಇಂಜಿನಿಯರಿಂಗ್ ತಂತ್ರಜ್ಞಾನದ ಪ್ರಗತಿಯನ್ನು ಇದು ಪ್ರದರ್ಶಿಸಲಿದೆ. ಈ ಅಕ್ವಾಡಾಕ್ಟ್ ಕೇಂದ್ರ ಸರ್ಕಾರದಿಂದ ಮೆಚ್ಚಗೆಗೆ ಪಾತ್ರವಾಗಿದ್ದು, ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದುಕೊಂಡಿದೆ.

ಎತ್ತಿನಹೊಳೆ ಯೋಜನೆಯ ತುಮಕೂರು ವಿಭಾಗದ ಮುಖ್ಯ ಎಂಜಿನಿಯರ್ ಎಚ್.ಎಸ್. ಆನಂದ್, ಮೇಲ್ಗಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಶ್ವದ ವಿವಿಧ ಯೋಜನೆಗಳನ್ನು ಪರಿಶೀಲಿಸಿ ಅಧ್ಯಯನ ಮಾಡಲಾಗಿದೆ. ಇದರ ನಿರ್ಮಾಣ ಕಾಮಗಾರಿಗೆ  ಭಾರತೀಯ ವಿಜ್ಞಾನ ಸಂಸ್ಥೆಯ ಸಲಹೆ ಪಡೆದುಕೊಳ್ಳಲಾಗಿದೆ. ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ನಮ್ಮ ಮೆಟ್ರೋ ಈ ಯೋಜನೆಯ ತಾಂತ್ರಿಕ ನೆರವು ಪಡೆದುಕೊಳ್ಳಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

33 minutes ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

41 minutes ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

48 minutes ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

56 minutes ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

11 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

12 hours ago