Advertisement
MIRROR FOCUS

ಎತ್ತಿನಹೊಳೆ ಯೋಜನೆಗೆ ಅತ್ಯಂತ ಎತ್ತರದ ಮೇಲ್ಗಾಲುವೆ | ತುಮಕೂರು ಜಿಲ್ಲೆ ಚೇಳೂರು ಬಳಿ ನಿರ್ಮಾಣ

Share

ಕೋಲಾರ– ಚಿಕ್ಕಬಳ್ಳಾಪುರ ಸೇರಿದಂತೆ ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಎತ್ತಿನಹೊಳೆ ಯೋಜನೆಗೆ ತುಮಕೂರು ಜಿಲ್ಲೆ ಬೆಳ್ಳಾವಿಯ ಬಳಿಯ ಚೇಳೂರು ಎಂಬಲ್ಲಿ ನಿರ್ಮಾಣವಾಗಿರುವ ಅಕ್ವಾಡಾಕ್ಟ್ ಮೇಲ್‌ ಕಾಲುವೆ ಈಗ ಗಮನ ಸೆಳೆಯುತ್ತಿದೆ. ದೇಶದ ಅತಿ ಎತ್ತರದ ಹಾಗೂ ಏಷ್ಯಾದಲ್ಲಿಯೇ ಅತಿ ಉದ್ದದ ಮೇಲ್ಗಾಲುವೆ ಇದಾಗಿದೆ. 10.4 ಕಿಲೋಮೀಟರ್ ಉದ್ದದ ಈ ಮೇಲ್ಗಾಲುವೆ ಕಾಮಗಾರಿ 2018ರಲ್ಲಿ ಆರಂಭವಾಗಿತ್ತು.

ಕೋವಿಡ್-19 ಮತ್ತು ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಎದುರಾದ ಸವಾಲುಗಳಿಂದ ವಿಳಂಬವಾಗಿ 2023ರಲ್ಲಿ ಪೂರ್ಣಗೊಂಡಿದ್ದು, ಇದೀಗ ರಾಷ್ಟ್ರ ಮನ್ನಣೆ ಪಡೆದುಕೊಂಡಿದೆ. ಸುಮಾರು 1 ಸಾವಿರದ 203 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಅಕ್ವಾಡಾಕ್ಟ್ 120 ಅಡಿ ಎತ್ತರದಲ್ಲಿದ್ದು, 3,300 ಕ್ಯೂಸೆಕ್ ನೀರನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಕೇವಲ ನೀರಿನ ಸಾಗಾಟದ ದೃಷ್ಟಿಯಿಂದ ಮಾತ್ರವಲ್ಲದೇ ಆಧುನಿಕ ಇಂಜಿನಿಯರಿಂಗ್ ತಂತ್ರಜ್ಞಾನದ ಪ್ರಗತಿಯನ್ನು ಇದು ಪ್ರದರ್ಶಿಸಲಿದೆ. ಈ ಅಕ್ವಾಡಾಕ್ಟ್ ಕೇಂದ್ರ ಸರ್ಕಾರದಿಂದ ಮೆಚ್ಚಗೆಗೆ ಪಾತ್ರವಾಗಿದ್ದು, ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದುಕೊಂಡಿದೆ.

ಎತ್ತಿನಹೊಳೆ ಯೋಜನೆಯ ತುಮಕೂರು ವಿಭಾಗದ ಮುಖ್ಯ ಎಂಜಿನಿಯರ್ ಎಚ್.ಎಸ್. ಆನಂದ್, ಮೇಲ್ಗಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಶ್ವದ ವಿವಿಧ ಯೋಜನೆಗಳನ್ನು ಪರಿಶೀಲಿಸಿ ಅಧ್ಯಯನ ಮಾಡಲಾಗಿದೆ. ಇದರ ನಿರ್ಮಾಣ ಕಾಮಗಾರಿಗೆ  ಭಾರತೀಯ ವಿಜ್ಞಾನ ಸಂಸ್ಥೆಯ ಸಲಹೆ ಪಡೆದುಕೊಳ್ಳಲಾಗಿದೆ. ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ನಮ್ಮ ಮೆಟ್ರೋ ಈ ಯೋಜನೆಯ ತಾಂತ್ರಿಕ ನೆರವು ಪಡೆದುಕೊಳ್ಳಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

12 minutes ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

52 minutes ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

8 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

14 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

14 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago