ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ. 18 ರಂದು ದೆಹಲಿಗೆ ತೆರಳುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ ನಂತರ ಮಾತನಾಡಿದ ಅವರು, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ. 508 ಎಕರೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರನ್ನು ಕೊಂಡೊಯ್ಯಲಾಗುವುದು ಎಂದು ಹೇಳಿದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…