ರಾಜ್ಯದ ಕುಡಿಯುವ ನೀರಿನ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು ನಿರ್ಣಾಯಕ ಘಟ್ಟ ತಲುಪಿದೆ.…..ಮುಂದೆ ಓದಿ….
2014 ರಲ್ಲಿ ಆರಂಭಗೊಂಡ ಯೋಜನೆಯ ಮೊದಲನೇ ಹಂತದ ಏತ ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಯೋಜನೆಯಡಿ ಗುರುತ್ವ ಕಾಲುವೆಗೆ ನೀರನ್ನು ಹರಿಸಲು ಯೋಜಿಸಲಾಗಿದೆ. ಗುರುತ್ವ ಕಾಲುವೆಯು ಒಟ್ಟು 252.61 ಕಿಲೋ ಮೀಟರ್ ಉದ್ದವಿದ್ದು, ಈ ಪೈಕಿ 42 ಕಿಲೋ ಮೀಟರ್ ವರಗಿನ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿಲ್ಲ.ಈ ಹಿನ್ನೆಲೆಯಲ್ಲಿ ಗುರುತ್ವ ಕಾಲುವೆಯ 32.50 ಕಿಲೋ ಮೀಟರ್ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 123.50 ಕಿಲೋ ಮೀಟರ್ ದೂರದಲ್ಲಿರುವ ವಾಣಿ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.
ಇದರ ಅನ್ವಯ ನಾಲಾ ಎಸ್ಕೇಪ್ ಮೂಲಕ ನೀರು ವೇದಾ ವ್ಯಾಲಿಯನ್ನು ಪ್ರವೇಶಿಸಿದ್ದು, ಈಗಾಗಲೇ ಹಳೇಬೀಡು ಮತ್ತು ಬೆಳವಾಡಿ ಕೆರೆಗಳು ತುಂಬಿ ಕೋಡಿ ಬಿದ್ದು, ವಾಣಿ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ. ಪ್ರಸಕ್ತ ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್ ಗಳಿಂದ ಸೆಪ್ಟಂಬರ್-5 ರೊಳಗೆ ಪೂರ್ವ ಪರೀಕ್ಷಾರ್ಥವಾಗಿ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲು ಯೋಜಿಸಲಾಗಿದೆ. ಒಟ್ಟಾರೆ ಎತ್ತಿನಹೊಳೆ ಯೋಜನೆಯನ್ನು 2027 ರ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Sorce : DD
The Ettinahole Integrated Drinking Water Scheme, a key drinking water project in the state, has reached a crucial stage. The initial phase of the project, which commenced in 2014, has been successfully completed after overcoming significant obstacles related to the implementation of elevation and power supply components.
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…