Advertisement
MIRROR FOCUS

ಎತ್ತಿನಹೊಳೆ ಯೋಜನೆ | ಮೊದಲ ಹಂತದ ಏತ, ವಿದ್ಯುತ್ ಪೂರೈಕೆ ಕಾಮಗಾರಿ ಪೂರ್ಣ |

Share

ರಾಜ್ಯದ  ಕುಡಿಯುವ ನೀರಿನ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು ನಿರ್ಣಾಯಕ ಘಟ್ಟ ತಲುಪಿದೆ.…..ಮುಂದೆ ಓದಿ….

Advertisement

2014 ರಲ್ಲಿ ಆರಂಭಗೊಂಡ ಯೋಜನೆಯ ಮೊದಲನೇ ಹಂತದ ಏತ ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಯೋಜನೆಯಡಿ ಗುರುತ್ವ ಕಾಲುವೆಗೆ ನೀರನ್ನು ಹರಿಸಲು ಯೋಜಿಸಲಾಗಿದೆ. ಗುರುತ್ವ ಕಾಲುವೆಯು ಒಟ್ಟು  252.61  ಕಿಲೋ ಮೀಟರ್ ಉದ್ದವಿದ್ದು, ಈ ಪೈಕಿ 42 ಕಿಲೋ ಮೀಟರ್ ವರಗಿನ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿಲ್ಲ.ಈ ಹಿನ್ನೆಲೆಯಲ್ಲಿ ಗುರುತ್ವ ಕಾಲುವೆಯ 32.50 ಕಿಲೋ ಮೀಟರ್ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 123.50  ಕಿಲೋ ಮೀಟರ್ ದೂರದಲ್ಲಿರುವ ವಾಣಿ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.

ಇದರ ಅನ್ವಯ ನಾಲಾ ಎಸ್ಕೇಪ್ ಮೂಲಕ ನೀರು ವೇದಾ ವ್ಯಾಲಿಯನ್ನು ಪ್ರವೇಶಿಸಿದ್ದು, ಈಗಾಗಲೇ ಹಳೇಬೀಡು ಮತ್ತು ಬೆಳವಾಡಿ ಕೆರೆಗಳು ತುಂಬಿ ಕೋಡಿ ಬಿದ್ದು, ವಾಣಿ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ. ಪ್ರಸಕ್ತ ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್ ಗಳಿಂದ ಸೆಪ್ಟಂಬರ್-5 ರೊಳಗೆ ಪೂರ್ವ ಪರೀಕ್ಷಾರ್ಥವಾಗಿ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲು ಯೋಜಿಸಲಾಗಿದೆ. ಒಟ್ಟಾರೆ ಎತ್ತಿನಹೊಳೆ ಯೋಜನೆಯನ್ನು 2027 ರ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Sorce : DD

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

 

The Ettinahole Integrated Drinking Water Scheme, a key drinking water project in the state, has reached  a crucial stage. The initial phase of the project, which commenced in 2014, has been successfully completed after overcoming significant obstacles related to the implementation of elevation and power supply components.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

4 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

4 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

18 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

23 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago