Advertisement
MIRROR FOCUS

ಎತ್ತಿನಹೊಳೆ ಯೋಜನೆ | ಮೊದಲ ಹಂತದ ಏತ, ವಿದ್ಯುತ್ ಪೂರೈಕೆ ಕಾಮಗಾರಿ ಪೂರ್ಣ |

Share

ರಾಜ್ಯದ  ಕುಡಿಯುವ ನೀರಿನ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು ನಿರ್ಣಾಯಕ ಘಟ್ಟ ತಲುಪಿದೆ.…..ಮುಂದೆ ಓದಿ….

2014 ರಲ್ಲಿ ಆರಂಭಗೊಂಡ ಯೋಜನೆಯ ಮೊದಲನೇ ಹಂತದ ಏತ ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಯೋಜನೆಯಡಿ ಗುರುತ್ವ ಕಾಲುವೆಗೆ ನೀರನ್ನು ಹರಿಸಲು ಯೋಜಿಸಲಾಗಿದೆ. ಗುರುತ್ವ ಕಾಲುವೆಯು ಒಟ್ಟು  252.61  ಕಿಲೋ ಮೀಟರ್ ಉದ್ದವಿದ್ದು, ಈ ಪೈಕಿ 42 ಕಿಲೋ ಮೀಟರ್ ವರಗಿನ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿಲ್ಲ.ಈ ಹಿನ್ನೆಲೆಯಲ್ಲಿ ಗುರುತ್ವ ಕಾಲುವೆಯ 32.50 ಕಿಲೋ ಮೀಟರ್ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 123.50  ಕಿಲೋ ಮೀಟರ್ ದೂರದಲ್ಲಿರುವ ವಾಣಿ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.

Advertisement

ಇದರ ಅನ್ವಯ ನಾಲಾ ಎಸ್ಕೇಪ್ ಮೂಲಕ ನೀರು ವೇದಾ ವ್ಯಾಲಿಯನ್ನು ಪ್ರವೇಶಿಸಿದ್ದು, ಈಗಾಗಲೇ ಹಳೇಬೀಡು ಮತ್ತು ಬೆಳವಾಡಿ ಕೆರೆಗಳು ತುಂಬಿ ಕೋಡಿ ಬಿದ್ದು, ವಾಣಿ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ. ಪ್ರಸಕ್ತ ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್ ಗಳಿಂದ ಸೆಪ್ಟಂಬರ್-5 ರೊಳಗೆ ಪೂರ್ವ ಪರೀಕ್ಷಾರ್ಥವಾಗಿ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲು ಯೋಜಿಸಲಾಗಿದೆ. ಒಟ್ಟಾರೆ ಎತ್ತಿನಹೊಳೆ ಯೋಜನೆಯನ್ನು 2027 ರ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Sorce : DD

Advertisement
ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement

 

The Ettinahole Integrated Drinking Water Scheme, a key drinking water project in the state, has reached  a crucial stage. The initial phase of the project, which commenced in 2014, has been successfully completed after overcoming significant obstacles related to the implementation of elevation and power supply components.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago