Advertisement
MIRROR FOCUS

ಎತ್ತಿನಹೊಳೆ ಯೋಜನೆ | ಮೊದಲ ಹಂತದ ಏತ, ವಿದ್ಯುತ್ ಪೂರೈಕೆ ಕಾಮಗಾರಿ ಪೂರ್ಣ |

Share

ರಾಜ್ಯದ  ಕುಡಿಯುವ ನೀರಿನ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು ನಿರ್ಣಾಯಕ ಘಟ್ಟ ತಲುಪಿದೆ.…..ಮುಂದೆ ಓದಿ….

2014 ರಲ್ಲಿ ಆರಂಭಗೊಂಡ ಯೋಜನೆಯ ಮೊದಲನೇ ಹಂತದ ಏತ ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಯೋಜನೆಯಡಿ ಗುರುತ್ವ ಕಾಲುವೆಗೆ ನೀರನ್ನು ಹರಿಸಲು ಯೋಜಿಸಲಾಗಿದೆ. ಗುರುತ್ವ ಕಾಲುವೆಯು ಒಟ್ಟು  252.61  ಕಿಲೋ ಮೀಟರ್ ಉದ್ದವಿದ್ದು, ಈ ಪೈಕಿ 42 ಕಿಲೋ ಮೀಟರ್ ವರಗಿನ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿಲ್ಲ.ಈ ಹಿನ್ನೆಲೆಯಲ್ಲಿ ಗುರುತ್ವ ಕಾಲುವೆಯ 32.50 ಕಿಲೋ ಮೀಟರ್ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 123.50  ಕಿಲೋ ಮೀಟರ್ ದೂರದಲ್ಲಿರುವ ವಾಣಿ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.

ಇದರ ಅನ್ವಯ ನಾಲಾ ಎಸ್ಕೇಪ್ ಮೂಲಕ ನೀರು ವೇದಾ ವ್ಯಾಲಿಯನ್ನು ಪ್ರವೇಶಿಸಿದ್ದು, ಈಗಾಗಲೇ ಹಳೇಬೀಡು ಮತ್ತು ಬೆಳವಾಡಿ ಕೆರೆಗಳು ತುಂಬಿ ಕೋಡಿ ಬಿದ್ದು, ವಾಣಿ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ. ಪ್ರಸಕ್ತ ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್ ಗಳಿಂದ ಸೆಪ್ಟಂಬರ್-5 ರೊಳಗೆ ಪೂರ್ವ ಪರೀಕ್ಷಾರ್ಥವಾಗಿ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲು ಯೋಜಿಸಲಾಗಿದೆ. ಒಟ್ಟಾರೆ ಎತ್ತಿನಹೊಳೆ ಯೋಜನೆಯನ್ನು 2027 ರ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Sorce : DD

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

 

The Ettinahole Integrated Drinking Water Scheme, a key drinking water project in the state, has reached  a crucial stage. The initial phase of the project, which commenced in 2014, has been successfully completed after overcoming significant obstacles related to the implementation of elevation and power supply components.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

9 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

9 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

10 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

14 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago