Advertisement
MIRROR FOCUS

ಎತ್ತಿನಹೊಳೆ ಯೋಜನೆ | ಮೊದಲ ಹಂತದ ಏತ, ವಿದ್ಯುತ್ ಪೂರೈಕೆ ಕಾಮಗಾರಿ ಪೂರ್ಣ |

Share

ರಾಜ್ಯದ  ಕುಡಿಯುವ ನೀರಿನ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು ನಿರ್ಣಾಯಕ ಘಟ್ಟ ತಲುಪಿದೆ.…..ಮುಂದೆ ಓದಿ….

2014 ರಲ್ಲಿ ಆರಂಭಗೊಂಡ ಯೋಜನೆಯ ಮೊದಲನೇ ಹಂತದ ಏತ ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಯೋಜನೆಯಡಿ ಗುರುತ್ವ ಕಾಲುವೆಗೆ ನೀರನ್ನು ಹರಿಸಲು ಯೋಜಿಸಲಾಗಿದೆ. ಗುರುತ್ವ ಕಾಲುವೆಯು ಒಟ್ಟು  252.61  ಕಿಲೋ ಮೀಟರ್ ಉದ್ದವಿದ್ದು, ಈ ಪೈಕಿ 42 ಕಿಲೋ ಮೀಟರ್ ವರಗಿನ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿಲ್ಲ.ಈ ಹಿನ್ನೆಲೆಯಲ್ಲಿ ಗುರುತ್ವ ಕಾಲುವೆಯ 32.50 ಕಿಲೋ ಮೀಟರ್ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 123.50  ಕಿಲೋ ಮೀಟರ್ ದೂರದಲ್ಲಿರುವ ವಾಣಿ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.

ಇದರ ಅನ್ವಯ ನಾಲಾ ಎಸ್ಕೇಪ್ ಮೂಲಕ ನೀರು ವೇದಾ ವ್ಯಾಲಿಯನ್ನು ಪ್ರವೇಶಿಸಿದ್ದು, ಈಗಾಗಲೇ ಹಳೇಬೀಡು ಮತ್ತು ಬೆಳವಾಡಿ ಕೆರೆಗಳು ತುಂಬಿ ಕೋಡಿ ಬಿದ್ದು, ವಾಣಿ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ. ಪ್ರಸಕ್ತ ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್ ಗಳಿಂದ ಸೆಪ್ಟಂಬರ್-5 ರೊಳಗೆ ಪೂರ್ವ ಪರೀಕ್ಷಾರ್ಥವಾಗಿ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲು ಯೋಜಿಸಲಾಗಿದೆ. ಒಟ್ಟಾರೆ ಎತ್ತಿನಹೊಳೆ ಯೋಜನೆಯನ್ನು 2027 ರ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Sorce : DD

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

 

The Ettinahole Integrated Drinking Water Scheme, a key drinking water project in the state, has reached  a crucial stage. The initial phase of the project, which commenced in 2014, has been successfully completed after overcoming significant obstacles related to the implementation of elevation and power supply components.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

8 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

12 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

13 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

13 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

13 hours ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

13 hours ago