ಸರ್ಕಾರಿ ಶಾಲೆ ಮಕ್ಕಳಿಗೆ ಗಂಧದ ಗುಡಿ ಸಿನಿಮಾ ವೀಕ್ಷಣೆಗೆ ನೆರವು

October 28, 2022
3:03 PM

ಅಕ್ಟೋಬರ್ 28ಕ್ಕೆ ವಿಶ್ವದಾದ್ಯಂತ ತೆರೆಮೇಲೆ ಕಾಣಿಸಿಕೊಳ್ಳಲಿರುವ ಗಂಧದ ಗುಡಿ ಸಿನಿಮಾ ಸರ್ಕಾರಿ ಶಾಲಾ ಮಕ್ಕಳು ಸಿನಿಮಾ ವೀಕ್ಷಿಸಲು ಗೋವಿಂದರಾಜನಗರದ ಮಾಜಿ ಎಂಎಲ್‌ಎ ಪ್ರಿಯಾ ಕೃಷ್ಣ ಅವರು ಉಚಿತವಾಗಿ ಸುಮಾರು 100 ಟಿಕೆಟ್‌ಗಳನ್ನು ನೀಡಿದ್ದಾರೆ.

Advertisement

ಮಕ್ಕಳಿಗೆ ಅನುಕೂಲವಾಗಲೆಂದು ಸುಮಾರು 100 ಟಿಕೆಟ್‌ಗಳನ್ನು ಉಚಿತವಾಗಿ ನೀಡಲಾಗಿದೆ. ಯುಗ ಎಂಬ ಎಂಜಿಓ ಮೂಲಕ ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಅಕ್ಟೋಬರ್ 28 ಬೆಳಗ್ಗೆಯ 10.30ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಗಡಿ ರಸ್ತೆಯಲ್ಲಿರುವ ಕಾಮಾಕ್ಷಿಪಾಳ್ಯದ ವಿಕ್ಟರಿ ಸಿನಿಮಾದಲ್ಲಿ 100 ಸರ್ಕಾರಿ ಶಾಲೆಯ ಮಕ್ಕಳು ಗಂಧದ ಗುಡಿ ಸಿನಿಮಾವನ್ನು ವೀಕ್ಷಣೆ ಮಾಡಲಿದ್ದಾರೆ.

ಅಪ್ಪು ಕೊನೆಯ ಸಿನಿಮಾ ‘ಗಂಧದ ಗುಡಿ’ ಕೇವಲ ಸಿನಿಮಾ ಅಷ್ಟೇ ಅಲ್ಲ. ಮಕ್ಕಳಿಗೆ ಅದೊಂದು ಶೈಕ್ಷಣಿಕ ಪ್ರವಾಸವೂ ಕೂಡ ಹೌದು. ಕರ್ನಾಟಕ ರಮಣೀಯ ಪ್ರದೇಶಗಳು, ವನ್ಯಜೀವಿಗಳು, ಸಸ್ಯರಾಶಿಗಳನ್ನು ಈ ಸಿನಿಮಾ ಮೂಲಕ ತಿಳಿಸಲಾಗಿದೆ. ‘ಗಂಧದ ಗುಡಿ’ ಒಂದು ಸಿನಿಮಾದ ಅನುಭವವನ್ನೂ ನೀಡುತ್ತದೆ. ಜೊತೆಗೆ ಇಂದಿನ ಪೀಳಿಗೆಗೆ ಒಂದು ಸಂದೇಶವನ್ನೂ ರವಾನಿಸುತ್ತೆ. ಈ ಕಾರಣಕ್ಕೆ ‘ಗಂಧದ ಗುಡಿ’ ಒಂದು ವಿಶಿಷ್ಠ ಅನುಭವವೂ ಹೌದು.

ಕರುನಾಡಿನ ಪ್ರಕೃತಿ ಸಂಪತ್ತನ್ನು ತೆರೆಮೇಲೆ ತೋರಿಸುವ ಪ್ರಯತ್ನಕ್ಕೆ ಪುನೀತ್ ರಾಜ್‌ಕುಮಾರ್ ಮುಂದಾಗಿದ್ದರು. ಅದನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಮರೆಯಾಗ್ಬಿಟ್ಟರು. ಈಗ ಅವರ ಕನಸು ಜನರಿಗೆ ತಲುಪಲು ವೇದಿಕೆ ಸಜ್ಜಾಗಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ
April 16, 2025
9:41 PM
by: ಡಾ.ಚಂದ್ರಶೇಖರ ದಾಮ್ಲೆ
ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ
April 16, 2025
8:40 PM
by: ದ ರೂರಲ್ ಮಿರರ್.ಕಾಂ
ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!
April 16, 2025
11:18 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |
April 16, 2025
10:50 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group