ಸರ್ಕಾರಿ ಶಾಲೆ ಮಕ್ಕಳಿಗೆ ಗಂಧದ ಗುಡಿ ಸಿನಿಮಾ ವೀಕ್ಷಣೆಗೆ ನೆರವು

October 28, 2022
3:03 PM

ಅಕ್ಟೋಬರ್ 28ಕ್ಕೆ ವಿಶ್ವದಾದ್ಯಂತ ತೆರೆಮೇಲೆ ಕಾಣಿಸಿಕೊಳ್ಳಲಿರುವ ಗಂಧದ ಗುಡಿ ಸಿನಿಮಾ ಸರ್ಕಾರಿ ಶಾಲಾ ಮಕ್ಕಳು ಸಿನಿಮಾ ವೀಕ್ಷಿಸಲು ಗೋವಿಂದರಾಜನಗರದ ಮಾಜಿ ಎಂಎಲ್‌ಎ ಪ್ರಿಯಾ ಕೃಷ್ಣ ಅವರು ಉಚಿತವಾಗಿ ಸುಮಾರು 100 ಟಿಕೆಟ್‌ಗಳನ್ನು ನೀಡಿದ್ದಾರೆ.

ಮಕ್ಕಳಿಗೆ ಅನುಕೂಲವಾಗಲೆಂದು ಸುಮಾರು 100 ಟಿಕೆಟ್‌ಗಳನ್ನು ಉಚಿತವಾಗಿ ನೀಡಲಾಗಿದೆ. ಯುಗ ಎಂಬ ಎಂಜಿಓ ಮೂಲಕ ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಅಕ್ಟೋಬರ್ 28 ಬೆಳಗ್ಗೆಯ 10.30ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಗಡಿ ರಸ್ತೆಯಲ್ಲಿರುವ ಕಾಮಾಕ್ಷಿಪಾಳ್ಯದ ವಿಕ್ಟರಿ ಸಿನಿಮಾದಲ್ಲಿ 100 ಸರ್ಕಾರಿ ಶಾಲೆಯ ಮಕ್ಕಳು ಗಂಧದ ಗುಡಿ ಸಿನಿಮಾವನ್ನು ವೀಕ್ಷಣೆ ಮಾಡಲಿದ್ದಾರೆ.

ಅಪ್ಪು ಕೊನೆಯ ಸಿನಿಮಾ ‘ಗಂಧದ ಗುಡಿ’ ಕೇವಲ ಸಿನಿಮಾ ಅಷ್ಟೇ ಅಲ್ಲ. ಮಕ್ಕಳಿಗೆ ಅದೊಂದು ಶೈಕ್ಷಣಿಕ ಪ್ರವಾಸವೂ ಕೂಡ ಹೌದು. ಕರ್ನಾಟಕ ರಮಣೀಯ ಪ್ರದೇಶಗಳು, ವನ್ಯಜೀವಿಗಳು, ಸಸ್ಯರಾಶಿಗಳನ್ನು ಈ ಸಿನಿಮಾ ಮೂಲಕ ತಿಳಿಸಲಾಗಿದೆ. ‘ಗಂಧದ ಗುಡಿ’ ಒಂದು ಸಿನಿಮಾದ ಅನುಭವವನ್ನೂ ನೀಡುತ್ತದೆ. ಜೊತೆಗೆ ಇಂದಿನ ಪೀಳಿಗೆಗೆ ಒಂದು ಸಂದೇಶವನ್ನೂ ರವಾನಿಸುತ್ತೆ. ಈ ಕಾರಣಕ್ಕೆ ‘ಗಂಧದ ಗುಡಿ’ ಒಂದು ವಿಶಿಷ್ಠ ಅನುಭವವೂ ಹೌದು.

ಕರುನಾಡಿನ ಪ್ರಕೃತಿ ಸಂಪತ್ತನ್ನು ತೆರೆಮೇಲೆ ತೋರಿಸುವ ಪ್ರಯತ್ನಕ್ಕೆ ಪುನೀತ್ ರಾಜ್‌ಕುಮಾರ್ ಮುಂದಾಗಿದ್ದರು. ಅದನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಮರೆಯಾಗ್ಬಿಟ್ಟರು. ಈಗ ಅವರ ಕನಸು ಜನರಿಗೆ ತಲುಪಲು ವೇದಿಕೆ ಸಜ್ಜಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror