ಅಕ್ಟೋಬರ್ 28ಕ್ಕೆ ವಿಶ್ವದಾದ್ಯಂತ ತೆರೆಮೇಲೆ ಕಾಣಿಸಿಕೊಳ್ಳಲಿರುವ ಗಂಧದ ಗುಡಿ ಸಿನಿಮಾ ಸರ್ಕಾರಿ ಶಾಲಾ ಮಕ್ಕಳು ಸಿನಿಮಾ ವೀಕ್ಷಿಸಲು ಗೋವಿಂದರಾಜನಗರದ ಮಾಜಿ ಎಂಎಲ್ಎ ಪ್ರಿಯಾ ಕೃಷ್ಣ ಅವರು ಉಚಿತವಾಗಿ ಸುಮಾರು 100 ಟಿಕೆಟ್ಗಳನ್ನು ನೀಡಿದ್ದಾರೆ.
ಮಕ್ಕಳಿಗೆ ಅನುಕೂಲವಾಗಲೆಂದು ಸುಮಾರು 100 ಟಿಕೆಟ್ಗಳನ್ನು ಉಚಿತವಾಗಿ ನೀಡಲಾಗಿದೆ. ಯುಗ ಎಂಬ ಎಂಜಿಓ ಮೂಲಕ ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಅಕ್ಟೋಬರ್ 28 ಬೆಳಗ್ಗೆಯ 10.30ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಗಡಿ ರಸ್ತೆಯಲ್ಲಿರುವ ಕಾಮಾಕ್ಷಿಪಾಳ್ಯದ ವಿಕ್ಟರಿ ಸಿನಿಮಾದಲ್ಲಿ 100 ಸರ್ಕಾರಿ ಶಾಲೆಯ ಮಕ್ಕಳು ಗಂಧದ ಗುಡಿ ಸಿನಿಮಾವನ್ನು ವೀಕ್ಷಣೆ ಮಾಡಲಿದ್ದಾರೆ.
ಅಪ್ಪು ಕೊನೆಯ ಸಿನಿಮಾ ‘ಗಂಧದ ಗುಡಿ’ ಕೇವಲ ಸಿನಿಮಾ ಅಷ್ಟೇ ಅಲ್ಲ. ಮಕ್ಕಳಿಗೆ ಅದೊಂದು ಶೈಕ್ಷಣಿಕ ಪ್ರವಾಸವೂ ಕೂಡ ಹೌದು. ಕರ್ನಾಟಕ ರಮಣೀಯ ಪ್ರದೇಶಗಳು, ವನ್ಯಜೀವಿಗಳು, ಸಸ್ಯರಾಶಿಗಳನ್ನು ಈ ಸಿನಿಮಾ ಮೂಲಕ ತಿಳಿಸಲಾಗಿದೆ. ‘ಗಂಧದ ಗುಡಿ’ ಒಂದು ಸಿನಿಮಾದ ಅನುಭವವನ್ನೂ ನೀಡುತ್ತದೆ. ಜೊತೆಗೆ ಇಂದಿನ ಪೀಳಿಗೆಗೆ ಒಂದು ಸಂದೇಶವನ್ನೂ ರವಾನಿಸುತ್ತೆ. ಈ ಕಾರಣಕ್ಕೆ ‘ಗಂಧದ ಗುಡಿ’ ಒಂದು ವಿಶಿಷ್ಠ ಅನುಭವವೂ ಹೌದು.
ಕರುನಾಡಿನ ಪ್ರಕೃತಿ ಸಂಪತ್ತನ್ನು ತೆರೆಮೇಲೆ ತೋರಿಸುವ ಪ್ರಯತ್ನಕ್ಕೆ ಪುನೀತ್ ರಾಜ್ಕುಮಾರ್ ಮುಂದಾಗಿದ್ದರು. ಅದನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಮರೆಯಾಗ್ಬಿಟ್ಟರು. ಈಗ ಅವರ ಕನಸು ಜನರಿಗೆ ತಲುಪಲು ವೇದಿಕೆ ಸಜ್ಜಾಗಿದೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…