ಸುದ್ದಿಗಳು

ಸರ್ಕಾರಿ ಶಾಲೆ ಮಕ್ಕಳಿಗೆ ಗಂಧದ ಗುಡಿ ಸಿನಿಮಾ ವೀಕ್ಷಣೆಗೆ ನೆರವು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಕ್ಟೋಬರ್ 28ಕ್ಕೆ ವಿಶ್ವದಾದ್ಯಂತ ತೆರೆಮೇಲೆ ಕಾಣಿಸಿಕೊಳ್ಳಲಿರುವ ಗಂಧದ ಗುಡಿ ಸಿನಿಮಾ ಸರ್ಕಾರಿ ಶಾಲಾ ಮಕ್ಕಳು ಸಿನಿಮಾ ವೀಕ್ಷಿಸಲು ಗೋವಿಂದರಾಜನಗರದ ಮಾಜಿ ಎಂಎಲ್‌ಎ ಪ್ರಿಯಾ ಕೃಷ್ಣ ಅವರು ಉಚಿತವಾಗಿ ಸುಮಾರು 100 ಟಿಕೆಟ್‌ಗಳನ್ನು ನೀಡಿದ್ದಾರೆ.

Advertisement

ಮಕ್ಕಳಿಗೆ ಅನುಕೂಲವಾಗಲೆಂದು ಸುಮಾರು 100 ಟಿಕೆಟ್‌ಗಳನ್ನು ಉಚಿತವಾಗಿ ನೀಡಲಾಗಿದೆ. ಯುಗ ಎಂಬ ಎಂಜಿಓ ಮೂಲಕ ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಅಕ್ಟೋಬರ್ 28 ಬೆಳಗ್ಗೆಯ 10.30ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಗಡಿ ರಸ್ತೆಯಲ್ಲಿರುವ ಕಾಮಾಕ್ಷಿಪಾಳ್ಯದ ವಿಕ್ಟರಿ ಸಿನಿಮಾದಲ್ಲಿ 100 ಸರ್ಕಾರಿ ಶಾಲೆಯ ಮಕ್ಕಳು ಗಂಧದ ಗುಡಿ ಸಿನಿಮಾವನ್ನು ವೀಕ್ಷಣೆ ಮಾಡಲಿದ್ದಾರೆ.

ಅಪ್ಪು ಕೊನೆಯ ಸಿನಿಮಾ ‘ಗಂಧದ ಗುಡಿ’ ಕೇವಲ ಸಿನಿಮಾ ಅಷ್ಟೇ ಅಲ್ಲ. ಮಕ್ಕಳಿಗೆ ಅದೊಂದು ಶೈಕ್ಷಣಿಕ ಪ್ರವಾಸವೂ ಕೂಡ ಹೌದು. ಕರ್ನಾಟಕ ರಮಣೀಯ ಪ್ರದೇಶಗಳು, ವನ್ಯಜೀವಿಗಳು, ಸಸ್ಯರಾಶಿಗಳನ್ನು ಈ ಸಿನಿಮಾ ಮೂಲಕ ತಿಳಿಸಲಾಗಿದೆ. ‘ಗಂಧದ ಗುಡಿ’ ಒಂದು ಸಿನಿಮಾದ ಅನುಭವವನ್ನೂ ನೀಡುತ್ತದೆ. ಜೊತೆಗೆ ಇಂದಿನ ಪೀಳಿಗೆಗೆ ಒಂದು ಸಂದೇಶವನ್ನೂ ರವಾನಿಸುತ್ತೆ. ಈ ಕಾರಣಕ್ಕೆ ‘ಗಂಧದ ಗುಡಿ’ ಒಂದು ವಿಶಿಷ್ಠ ಅನುಭವವೂ ಹೌದು.

ಕರುನಾಡಿನ ಪ್ರಕೃತಿ ಸಂಪತ್ತನ್ನು ತೆರೆಮೇಲೆ ತೋರಿಸುವ ಪ್ರಯತ್ನಕ್ಕೆ ಪುನೀತ್ ರಾಜ್‌ಕುಮಾರ್ ಮುಂದಾಗಿದ್ದರು. ಅದನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಮರೆಯಾಗ್ಬಿಟ್ಟರು. ಈಗ ಅವರ ಕನಸು ಜನರಿಗೆ ತಲುಪಲು ವೇದಿಕೆ ಸಜ್ಜಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

3 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

5 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

15 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

15 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

22 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

1 day ago