ಅಕ್ಟೋಬರ್ 28ಕ್ಕೆ ವಿಶ್ವದಾದ್ಯಂತ ತೆರೆಮೇಲೆ ಕಾಣಿಸಿಕೊಳ್ಳಲಿರುವ ಗಂಧದ ಗುಡಿ ಸಿನಿಮಾ ಸರ್ಕಾರಿ ಶಾಲಾ ಮಕ್ಕಳು ಸಿನಿಮಾ ವೀಕ್ಷಿಸಲು ಗೋವಿಂದರಾಜನಗರದ ಮಾಜಿ ಎಂಎಲ್ಎ ಪ್ರಿಯಾ ಕೃಷ್ಣ ಅವರು ಉಚಿತವಾಗಿ ಸುಮಾರು 100 ಟಿಕೆಟ್ಗಳನ್ನು ನೀಡಿದ್ದಾರೆ.
ಮಕ್ಕಳಿಗೆ ಅನುಕೂಲವಾಗಲೆಂದು ಸುಮಾರು 100 ಟಿಕೆಟ್ಗಳನ್ನು ಉಚಿತವಾಗಿ ನೀಡಲಾಗಿದೆ. ಯುಗ ಎಂಬ ಎಂಜಿಓ ಮೂಲಕ ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಅಕ್ಟೋಬರ್ 28 ಬೆಳಗ್ಗೆಯ 10.30ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಗಡಿ ರಸ್ತೆಯಲ್ಲಿರುವ ಕಾಮಾಕ್ಷಿಪಾಳ್ಯದ ವಿಕ್ಟರಿ ಸಿನಿಮಾದಲ್ಲಿ 100 ಸರ್ಕಾರಿ ಶಾಲೆಯ ಮಕ್ಕಳು ಗಂಧದ ಗುಡಿ ಸಿನಿಮಾವನ್ನು ವೀಕ್ಷಣೆ ಮಾಡಲಿದ್ದಾರೆ.
ಅಪ್ಪು ಕೊನೆಯ ಸಿನಿಮಾ ‘ಗಂಧದ ಗುಡಿ’ ಕೇವಲ ಸಿನಿಮಾ ಅಷ್ಟೇ ಅಲ್ಲ. ಮಕ್ಕಳಿಗೆ ಅದೊಂದು ಶೈಕ್ಷಣಿಕ ಪ್ರವಾಸವೂ ಕೂಡ ಹೌದು. ಕರ್ನಾಟಕ ರಮಣೀಯ ಪ್ರದೇಶಗಳು, ವನ್ಯಜೀವಿಗಳು, ಸಸ್ಯರಾಶಿಗಳನ್ನು ಈ ಸಿನಿಮಾ ಮೂಲಕ ತಿಳಿಸಲಾಗಿದೆ. ‘ಗಂಧದ ಗುಡಿ’ ಒಂದು ಸಿನಿಮಾದ ಅನುಭವವನ್ನೂ ನೀಡುತ್ತದೆ. ಜೊತೆಗೆ ಇಂದಿನ ಪೀಳಿಗೆಗೆ ಒಂದು ಸಂದೇಶವನ್ನೂ ರವಾನಿಸುತ್ತೆ. ಈ ಕಾರಣಕ್ಕೆ ‘ಗಂಧದ ಗುಡಿ’ ಒಂದು ವಿಶಿಷ್ಠ ಅನುಭವವೂ ಹೌದು.
ಕರುನಾಡಿನ ಪ್ರಕೃತಿ ಸಂಪತ್ತನ್ನು ತೆರೆಮೇಲೆ ತೋರಿಸುವ ಪ್ರಯತ್ನಕ್ಕೆ ಪುನೀತ್ ರಾಜ್ಕುಮಾರ್ ಮುಂದಾಗಿದ್ದರು. ಅದನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಮರೆಯಾಗ್ಬಿಟ್ಟರು. ಈಗ ಅವರ ಕನಸು ಜನರಿಗೆ ತಲುಪಲು ವೇದಿಕೆ ಸಜ್ಜಾಗಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…